
ಅಯೋಧ್ಯಾ: ಇಂದು ಕೇರಳ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಭೇಟಿ ನೀಡಿ ದೇಗುಲದ ಗರ್ಭಗುಡಿಯಲ್ಲಿ ಶ್ರೀರಾಮನ ದರ್ಶನ ಪಡೆದು ರಾಮಲಲ್ಲಾನ ಮುಂದೆ ತಲೆಬಾಗಿ ನಮಸ್ಕರಿಸಿದ್ದಾರೆ.
ಜೈಶ್ರೀರಾಮ್ ಎಂಬ ಘೋಷಣೆಗಳ ನಡುವೆ ಕೇರಳ ಗವರ್ನರ್ ಮೊಹಮ್ಮದ್ ಆರೀಫ್ ಅಯೋಧ್ಯೆ ಶ್ರೀರಾಮನ ಆಶೀರ್ವಾದ ಪಡೆದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅಯೋಧ್ಯೆಗೆ ಬಂದು ಶ್ರೀರಾಮನ ಪೂಜೆ ಮಾಡುವುದು ನನಗೆ ಹೆಮ್ಮೆಯ ವಿಚಾರ, ನಾನು ಕಳೆದ ಜನವರಿಯಲ್ಲಿ ಎರಡು ಬಾರಿ ಅಯೋಧ್ಯೆಗೆ ಭೇಟಿ ನೀಡಿದ್ದೆ. ಅಂದು ಯಾವ ಭಾವನೆ ಇತ್ತೋ ಇಂದು ಅದೇ ಭಾವನೆ ಇದೆ. ಹಲವು ಬಾರಿ ನಾನು ಅಯೋಧ್ಯೆಗೆ ಭೇಟಿ ನೀಡಿದ್ದೇನೆ. ಇದು ನಮಗೆ ಬರೀ ಖುಷಿಯ ವಿಚಾರ ಅಲ್ಲ, ಅಯೋಧ್ಯೆಗೆ ಬಂದು ಶ್ರೀರಾಮನ ಆರಾಧನೆ ಮಾಡುವುದು ನಮಗೆ ಹೆಮ್ಮೆಯ ವಿಚಾರ ಎಂದು ಸಂತಸ ಹಂಚಿಕೊಂಡಿದ್ದಾರೆ