
ಹಾಸನ: ಶ್ರೀಕ್ಷೇತ್ರ ಹಾರನಹಳ್ಳಿ ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಯವರು ರಾಜಕೀಯದಲ್ಲಿ ಅದಲು ಬದಲು, ಸೋಲು-ಗೆಲುವು, ಕೇಂದ್ರ ಹಾಗೂ ರಾಜ್ಯದಲ್ಲೂ ಆಗಲಿದೆ ಎಂದು ಸ್ಫೋಟಕ ಭವಿಷ್ಯ ನುಡಿದಿದ್ದಾರೆ.
ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದವರ ಬದಲಾವಣೆ ಆಗಬಹುದು. ಅಭಿಮನ್ಯುವಿನ ಬಿಲ್ಲನ್ನು ಮೋಸದಿಂದ ಕರ್ಣನ ಕೈಯಲ್ಲಿ ದಾರ ಕಟ್ ಮಾಡಿಸುತ್ತಾರೆ. ಮಹಾಭಾರತದಲ್ಲಿ ಕೃಷ್ಣ ಇದ್ದ, ಗದಾಯುದ್ಧದಲ್ಲಿ ಭೀಮ ಗೆದ್ದ. ಇದೀಗ ಕೃಷ್ಣ ಇಲ್ಲದೆ ದುರ್ಯೋಧನ ಗೆಲ್ತಾನೆ ಎಂದು ಹೇಳಿದ್ದೇನೆ. ಅದರ ಅರ್ಥ ಆಮೇಲೆ ಹೇಳುವೆ ಎನ್ನುವ ಮೂಲಕ ರಾಜಕೀಯವಾಗಿ ನಾಯಕರಿಗೆ ಏಳು-ಬೀಳು, ಹಿನ್ನಡೆ-ಮುನ್ನಡೆಯ ಭವಿಷ್ಯವನ್ನು ಮಹಾ ಭಾರತದ ಪ್ರಸಂಗ ಉದ್ಧರಿಸಿ ಹೇಳಿದರು.
ಮಳೆಯಿಂದ ಹೆಚ್ಚು ತೊಂದರೆ ಇದೆ. ಒಂದು ಆಕಾಶ ತತ್ವದ ಪ್ರಕಾರ ತೊಂದರೆ ಆಗಬಹುದು. ಅದು ರಾಜನ ಮೇಲೆ ಭಂಗ ಬೀರಲಿದೆ. ಪ್ರಾಕೃತಿಕ ದೋಷ ಇದೆ, ಐದು ಕಡೆಯೂ ಅಂದರೆ ಭೂಮಿ, ಅಗ್ನಿ, ವಾಯು, ಆಕಾಶ ಎಲ್ಲ ಕಡೆಯಿಂದಲೂ ತೊಂದರೆ ಆಗುತ್ತದೆ ಎಂದು ಹೇಳಿದರು













