
ಕಾರ್ಕಳ: ಕಾರ್ಕಳ ತಾಲೂಕು ಆಟೋ ರಿಕ್ಷಾ ಚಾಲಕರ-ಮಾಲಕರ ಸಂಘದ ವತಿಯಿಂದ ಆಗಸ್ಟ್ 9 ರಂದು ಭಾನುವಾರ ಬೆಳಗ್ಗೆ 9:30ಕ್ಕೆ ಕಾರ್ಕಳದ ಆನೆಕೆರೆಯ ಶ್ರೀ ಕೃಷ್ಣ ಕ್ಷೇತ್ರ ಸಭಾಭವನದಲ್ಲಿ ವಾರ್ಷಿಕ ಸಮಾವೇಶ ನಡೆಯಲಿದ್ದು ಇದರ ಪ್ರಯುಕ್ತ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ನಡೆಯಲಿದೆ.
2025-26ನೇ ಸಾಲಿನ ಎಸ್ಎಸ್ಎಲ್ಸಿ ಮತ್ತು ಪ್ರಥಮ ಹಾಗೂ ದ್ವಿತೀಯ ಪಿಯುಸಿಯಲ್ಲಿ ತೇರ್ಗಡೆ ಹೊಂದಿದ ಸಂಘದ ಸದಸ್ಯರ (ಮಕ್ಕಳು, ತಮ್ಮ ಹಾಗೂ ತಂಗಿಯರಿಗೆ) ವಿದ್ಯಾರ್ಥಿವೇತನ ನೀಡಲಿದ್ದಾರೆ.
ಸಂಘದ ಅಧ್ಯಕ್ಷ ಹಾಗೂ ವಕೀಲರಾದ ಬಿ. ಸದಾನಂದ ಸಾಲಿಯಾನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು ಮುಖ್ಯ ಅತಿಥಿಗಳಾಗಿ ವಕೀಲರಾದ ನಾಗೇಶ್ ವಿ. ಪೈ, ಪತ್ರಕರ್ತ ಹಾಗೂ ಖ್ಯಾತ ತುಳು ರಂಗಭೂಮಿ ಬರಹಗಾರರಾದ ವಿಲಾಸ್ ಕುಮಾರ್ ನಿಟ್ಟೆ, ವೀಣಾ ಬಾಲಕೃಷ್ಣ ಶೆಟ್ಟಿ, ನಿವೃತ್ತ ಮುಖ್ಯೋಪಾಧ್ಯಾಯ ಜಗದೀಶ ಹೆಗ್ಡೆ ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಎಲ್ಲರೂ ಪಾಲ್ಗೊಳ್ಳುವಂತೆ ಸಂಘದ ವತಿಯಿಂದ ಮನವಿ ಮಾಡಲಾಗಿದೆ.

























































