
ಕನೌಜ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಉತ್ತರ ಪ್ರದೇಶದ ಕನೌಜ್ನ ಸಮಾಜವಾದಿ ಪಕ್ಷದ ಅಭ್ಯರ್ಥಿ ಹಾಗೂ ಪಕ್ಷದ ನೇತಾರ ಅಖಿಲೇಶ್ ಯಾದವ್ ಪರ ಮತಯಾಚನೆ ಮಾಡಿ ಮಾತನಾಡಿದ್ದು ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗುವುದಿಲ್ಲ. ಇದನ್ನು ಬರೆದಿಟ್ಟುಕೊಳ್ಳಿ ಎಂದು ಸವಾಲೆಸೆದಿದ್ದಾರೆ.
‘ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ಮೈತ್ರಿ ಮಾಡುಕೊಂಡು ಚುನಾವಣೆಯಲ್ಲಿ ಸ್ವರ್ಧಿಸುತ್ತಿವೆ. ಇಲ್ಲಿ ಇಂಡಿಯಾ ಕೂಟದ ಬಿರುಗಾಳಿ ಬೀಸುತ್ತಿದೆ. ಈ ಗಾಳಿಗೆ ಸಿಲುಕಿ ಬಿಜೆಪಿ ಅತಿ ದೊಡ್ಡ ಸೋಲನ್ನು ಕಾಣಲಿದೆ. ಆದ್ದರಿಂದ ಮತ್ತೊಮ್ಮೆ ಪ್ರಧಾನಮಂತ್ರಿಯಾಗಿ ಮೋದಿ ಆಯ್ಕೆಯಾಗುವುದಿಲ್ಲ. ಇದನ್ನು ಬೇಕಾದರೆ ಮತದಾರರು ಬರೆದಿಟ್ಟುಕೊಳ್ಳಿ’ ಎಂದು ಹೇಳಿದ್ದಾರೆ.