
ಬೆಂಗಳೂರು: ಆಹಾರ ಮತ್ತು ಸುರಕ್ಷೆ ಗುಣಮಟ್ಟ ಇಲಾಖೆ ರಾಜ್ಯಾದ್ಯಂತ 78 ಪಾನಿಪುರಿಯ ಮಾದರಿಗಳನ್ನು ಸಂಗ್ರಹಿಸಿ ಆಹಾರ ಸುರಕ್ಷೆ ಹಾಗೂ ಗುಣಮಟ್ಟದ ಇಲಾಖೆ ಪರೀಕ್ಷೆ ಒಳಪಡಿಸಲಾಗಿದ್ದು ಈ ವರದಿಯಲ್ಲಿ ಹಾನಿಕಾರಕ ಅಂಶ ಪತ್ತೆಯಾದ ಹಿನ್ನೆಲೆಯಲ್ಲಿ ಸೋಮವಾರ ಸಭೆ ನಡೆಸಿ ಅಸುರಕ್ಷಿತ ಪಾನಿಪೂರಿ ಮಾರಾಟವನ್ನು ರದ್ದು ಮಾಡುವ ಸಾಧ್ಯತೆಗಳಿವೆ.
78 ಪಾನಿಪುರಿಗಳ ಪೈಕಿ 18 ಮಾದರಿಗಳು ಮನುಷ್ಯರು ಸೇವಿಸಲು ಅಯೋಗ್ಯ ಎಂಬ ವರದಿ ಇಲಾಖೆಯ ಅಧಿಕಾರಿಗಳ ಕೈ ಸೇರಿದೆ. ಹೀಗಾಗಿ ಈ ಕುರಿತು ಇಂದು ಸಭೆ ನಡೆಯಲಿದ್ದು ಮಹತ್ವದ ನಿರ್ಧಾರ ನಿರ್ಣಯವಾಗಲಿದೆ.
ಪಾನಿಪೂರಿ ಹಾಗೂ ಮಸಾಲಪೂರಿಯಲ್ಲಿ ರುಚಿ ಹೆಚ್ಚಿಸುವ ಖಟ್ಟಾ-ಮೀಠಾ ಸಾಸ್ನಲ್ಲಿ ಆರೋಗ್ಯಕ್ಕೆ ಹಾನಿಕರವಾದ ಕೆಮಿಕಲ್ ಇರುವುದು ಪತ್ತೆಯಾಗಿದ್ದು ಇವುಗಳಲ್ಲಿ ಕೃತಕ ಬಣ್ಣ ಬಳಕೆಯಾಗುತ್ತಿದೆ. ಇದರ ಸೇವನೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ ಎಂದು ವರದಿಯಾಗಿದೆ.