
ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಮಹತ್ವದ ಸಿಹಿಸುದ್ದಿ ನೀಡಿದ್ದು, ಕರ್ನಾಟಕ ಸಿವಿಲ್ ಸೇವೆಗಳ ನೇಮಕಾತಿಯಲ್ಲಿ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯನ್ನು 5 ವರ್ಷಗಳ ಕಾಲ ಸಡಿಲಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ.
ಈ ತೀರ್ಮಾನದಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿ 35ರಿಂದ 40ಕ್ಕೆ, ಪರಿಶಿಷ್ಟ ಜಾತಿ–ಪಂಗಡ ಅಭ್ಯರ್ಥಿಗಳಿಗೆ 38ರಿಂದ 43ಕ್ಕೆ ಹೆಚ್ಚಿಸಲಾಗಿದ್ದು, ಹಿಂದುಳಿದ ವರ್ಗಗಳಿಗೂ ನಿಯಮಾನುಸಾರ 5 ವರ್ಷಗಳ ವಿನಾಯಿತಿ ಅನ್ವಯವಾಗಲಿದೆ.
ಈ ಸಡಿಲಿಕೆ 31 ಡಿಸೆಂಬರ್ 2027ರವರೆಗೆ ಹೊರಡಿಸಲ್ಪಡುವ ಎಲ್ಲಾ ಸರ್ಕಾರಿ ನೇಮಕಾತಿ ಅಧಿಸೂಚನೆಗಳಿಗೆ ಅನ್ವಯವಾಗಲಿದ್ದು, ಕೋವಿಡ್ ಸೇರಿದಂತೆ ವಿವಿಧ ಕಾರಣಗಳಿಂದ ನೇಮಕಾತಿ ವಿಳಂಬವಾಗಿ ವಯೋಮಿತಿ ಮೀರಿದ್ದ ಲಕ್ಷಾಂತರ ಅಭ್ಯರ್ಥಿಗಳಿಗೆ ಇದು ದೊಡ್ಡ ಪರಿಹಾರವಾಗಲಿದೆ ಎಂದು ಸರ್ಕಾರ ತಿಳಿಸಿದೆ.








