
ಬೆಂಗಳೂರು: ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಉತ್ತಮ ಅವಕಾಶ ಲಭ್ಯವಾಗಿದೆ. ಕರ್ನಾಟಕ ಕಂದಾಯ ಇಲಾಖೆಯು ಖಾಲಿ ಇರುವ ಉಪ ತಹಶೀಲ್ದಾರ್ ಹಾಗೂ ಕಾನೂನು ಬೆರಳಚ್ಚುಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಈ ನೇಮಕಾತಿಯಲ್ಲಿ ಒಟ್ಟು 3 ಹುದ್ದೆಗಳು ಲಭ್ಯವಿದ್ದು, ಆಯ್ಕೆಯಾದವರು ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ. ಈ ಹುದ್ದೆಗಳಿಗೆ ಮಾಸಿಕವಾಗಿ ರೂ. 22,000 ರಿಂದ 55,000ರವರೆಗೆ ವೇತನ ನಿಗದಿಪಡಿಸಲಾಗಿದೆ.
ವಿಶೇಷವಾಗಿ ಐಎಂಎ ಹಾಗೂ ಇತರ ಕಂಪನಿ ವಂಚನೆ ಪ್ರಕರಣಗಳಿಗೆ ಸಂಬಂಧಿಸಿದ ವಿಶೇಷ ಅಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರದ ಕಚೇರಿಯಲ್ಲಿ ಸೇವೆ ಸಲ್ಲಿಸಲು ಅವಕಾಶ ನೀಡಲಾಗಿದೆ.
ಅರ್ಹತೆ ಕುರಿತಂತೆ, ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ LLB, BE/B.Tech (CSE/IS) ಅಥವಾ ಪಿಜಿ ಡಿಪ್ಲೊಮಾ ವಿದ್ಯಾರ್ಹತೆಯನ್ನು ಹೊಂದಿರಬೇಕು. ಅನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುತ್ತದೆ. ವಯೋಮಿತಿ ಗರಿಷ್ಠ 65 ವರ್ಷಗಳ ಒಳಗಾಗಿ ಇರಬೇಕೆಂದು ಅಧಿಸೂಚನೆ ತಿಳಿಸಿದೆ.
ಆಸಕ್ತರು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ವಯಸ್ಸು, ವಿದ್ಯಾರ್ಹತೆ ಹಾಗೂ ಅನುಭವಕ್ಕೆ ಸಂಬಂಧಿಸಿದ ಸ್ವಯಂ ದೃಢೀಕೃತ ದಾಖಲೆಗಳನ್ನು ಲಗತ್ತಿಸಿ, ಏಪ್ರಿಲ್ 04ರೊಳಗೆ “ವಿಶೇಷ ಅಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರದ ಕಚೇರಿ (ಐಎಂಎ ಮತ್ತು ಇತರ ಕಂಪನಿ ವಂಚನೆ ಪ್ರಕರಣಗಳು)” ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಅಧಿಸೂಚನೆಯನ್ನು ಗಮನದಿಂದ ಓದಿ ಅರ್ಹತೆಯನ್ನು ಪರಿಶೀಲಿಸಿಕೊಂಡು ಜೊತೆಗೆ ಇತ್ತೀಚಿನ ಫೋಟೋ, ರೆಸ್ಯೂಮ್ ಹಾಗೂ ಸರಿಯಾದ ಸಂಪರ್ಕ ವಿವರಗಳನ್ನು ನೀಡುವುದು ಅಗತ್ಯವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕರ್ನಾಟಕ ಕಂದಾಯ ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ.






















































