
ಕಾರ್ಕಳ: ಏಪ್ರಿಲ್ 28ರಂದು ಆನೆಕೆರೆಯಲ್ಲಿ ಬೈಕಿಗೆ ಪಿಕಪ್ ಡಿಕ್ಕಿಯಾಗಿದ್ದು ಪರಿಣಾಮ ಸವಾರರಿಬ್ಬರು ಗಾಯಗೊಂಡ ಘಟನೆ ನಡೆದಿದೆ.
ಸಾಣೂರಿನ ಸುಶಾಂತ್ ಎಂಬವರು ಬೈಕಿನಲ್ಲಿ ತಮ್ಮ ಪ್ರಶಾಂತ್ ಎಂಬವರ ಜೊತೆ ಕಸಬಾ ಗ್ರಾಮದ ಆನೆಕೆರೆ ಮಸೀದಿ ಬಳಿ ಮೂರು ಮಾರ್ಗ ಕಡೆಯಿಂದ ಆನೆಕೆರೆ ಕಡೆಗೆ ಹಾದುಹೋಗಿರುವ ಸಾರ್ವಜನಿಕ ರಸ್ತೆಯಲ್ಲಿ ಸಾಗುತ್ತಿರುವಾಗ ಮೂರು ಮಾರ್ಗ ಕಡೆಯಿಂದ ಆನೆಕೆರೆಗೆ ಬರುತ್ತಿದ್ದ ಪಿಕಪ್ ಗೂಡ್ಸ್ ವಾಹನ ಡಿಕ್ಕಿಯಾಗಿದೆ. ಪರಿಣಾಮ ಬೈಕ್ ನಲ್ಲಿದ್ದ ಪ್ರಶಾಂತ್ ಹಾಗೂ ಸುಶಾಂತ್ ಇಬ್ಬರು ನೆಲಕ್ಕೆ ಬಿದ್ದು ಗಾಯಗೊಂಡಿದ್ದು ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.
ಗೂಡ್ಸ್ ವಾಹನದ ಚಾಲಕ ಡಿಕ್ಕಿ ಹೊಡೆದು ವಾಹನ ನಿಲ್ಲಿಸದೆ ಓಡಿಹೋಗಿದ್ದು ,ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.