
ಕಾರ್ಕಳ : ನಿಟ್ಟೆ ದೂಪದಕಟ್ಟೆ ರಾಜ್ಯ ಹೆದ್ದಾರಿ ಬಳಿ ಕಾರ್ಕಳದ ಉದ್ಯಮಿ ದಿಲೀಪ್ ಎನ್.ಆರ್. ಸ್ವಯಂ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದಿದ್ದಾರೆ.
ಮಂಗಳವಾರ ನಸುಕಿನ ಜಾವದಲ್ಲಿ ಈ ಘಟನೆ ನಡೆದಿದೆ.
ಕಾರ್ಕಳ ಪುರಸಭೆಯ ಮಾಜಿ ಅಧ್ಯಕ್ಷ ಸುಭೀತ್ ಎನ್.ಆರ್ ಇವರ ಸಹೋದರ. ಮಾಜಿ ಸಚಿವ ವಿನಯಕುಮಾರ್ ನಿಕಟ ಸಂಬಂಧಿಯೂ ಆಗಿದ್ದಾರೆ. ಮಂಗಳೂರಿನಲ್ಲಿ ಉದ್ಯಮ ನಡೆಸುತ್ತಿದ್ದರು.