
ಕಾರ್ಕಳ:ತಾಲೂಕಿನಲ್ಲಿ ಜೂ.27 ರಂದು ಪೂರ್ವಾಹ್ನ 11:00 ಗಂಟೆಗೆ ತಾಲೂಕು ಮಟ್ಟದ ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ಸುಂದರ ಪುರಾಣಿಕ ಸ್ಮಾರಕ ಸರಕಾರಿ ಸಂಯುಕ್ತ ಪ್ರೌಡ ಶಾಲೆ, ಪೆರ್ವಾಜೆ ಇಲ್ಲಿ ಹಮ್ಮಿಕೊಳ್ಳಲಾಗಿದೆ,ಇದಕ್ಕೆ ಪೂರಕವಾಗಿ ಕೆಂಪೇಗೌಡ ರವರ ಬಗ್ಗೆ ಭಾಷಣ, ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.ಇದರ ಮೇಲುಸ್ತುವರಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಯವರು ವಹಿಸಲಾಗಿದ್ದು.ಎಲ್ಲಾ ಶಾಲಾ ಕಾಲೇಜುಗಳಲ್ಲಿ ಕೆಂಪೇಗೌಡರ ಜಯಂತಿ ಆಚರಿಸುವುದರ ಕುರಿತು ಉಪನ್ಯಾಸವನ್ನು ಮಾಡುವುದು. ಕೆಂಪೇಗೌಡರ ಕುರಿತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಕುರಿತು ತಾಲೂಕು ಕಛೇರಿಯಲ್ಲಿ ಸಭೆ ಮಾಡಲಾಗಿದ್ದು,ಕಾರ್ಯಕ್ರಮ ಯಶಸ್ವಿಗೆ ಸಹಕಾರ ನೀಡುವಂತೆ ಕೋರಿದೆ. ಹಾಗೂ ಈ ಕಾರ್ಯಕ್ರಮದಲ್ಲಿ ತಾಲೂಕಿನ ಎಲ್ಲಾ ಗೌರವನ್ವಿತ ಚುನಾಯಿತ ಜನಪ್ರತಿನಿಧಿಗಳು, ತಾಲೂಕಿನ ಎಲ್ಲಾ ಇಲಾಖಾ ಮಟ್ಟದ ಅಧಿಕಾರಿಗಳಿಗೆ ಹಾಗೂ ಎಲ್ಲಾ ಸಂಘ ಸಂಸ್ಥೆಯ ಪದಾಧಿಕಾರಿಗಳು ಮತ್ತು ಸಾರ್ವಜನಿಕರು ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಗಳಲ್ಲಿ ಭಾಗವಹಿಸಿ, ಕಾರ್ಯಕ್ರಮ ಯಶಸ್ವಿಗೆ ಪೂರ್ಣ ಸಹಕಾರ ನೀಡುವಂತೆ ಕಾರ್ಕಳ ತಹಶೀಲ್ದಾರ್ ನರಸಪ್ಪ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ