
ಕಾರ್ಕಳ ತಾಲೂಕಿನಲ್ಲಿ ನಿರ್ಮಾಣಗೊಂಡಿರುವ ಡಾ. ಬಿ.ಆರ್. ಅಂಬೇಡ್ಕರ್ ಸಭಾಭವನದಲ್ಲಿ ಇನ್ನೂ ಹಲವು ಮೂಲಭೂತ ಅಭಿವೃದ್ಧಿ ಕಾಮಗಾರಿಗಳು ಬಾಕಿ ಉಳಿದಿದ್ದು, ಅವುಗಳನ್ನು ಪೂರ್ಣಗೊಳಿಸಲು ರಾಜ್ಯ ಸರ್ಕಾರ ಹೆಚ್ಚುವರಿಯಾಗಿ ₹4 ಕೋಟಿ ಅನುದಾನ ಬಿಡುಗಡೆ ಮಾಡಬೇಕು ಎಂದು ಡಾ. ಬಿ.ಆರ್. ಅಂಬೇಡ್ಕರ್ ಭವನ ನಿರ್ಮಾಣ ಸಮಿತಿ ವತಿಯಿಂದ ಜುಲೈ 15 ರಂದು ಕಾರ್ಕಳ ಪ್ರವಾಸಿ ಮಂದಿರಕ್ಕೆ ಬೇಟಿ ನೀಡಿದ ಲೋಕೋಪಯೋಗಿ ಸಚಿವರಾದಂತಹ ಸತೀಶ್ ಜಾರಕಿಹೊಳೆ ಅವರಿಗೆ ಮನವಿ ಸಲ್ಲಿಸಿದ್ದರು.
ಸಭಾಭವನಕ್ಕೆ ಅಗತ್ಯವಾದ ಪೀಠೋಪಕರಣಗಳು, ಸುಸಜ್ಜಿತ ಆವರಣ ಗೋಡೆ, ಮುಂಭಾಗದ ಅಂಗಳದಲ್ಲಿ ಇಂಟರ್ಲಾಕ್ ಅಳವಡಿಕೆ ಸೇರಿದಂತೆ ಹಲವು ಕಾಮಗಾರಿಗಳು ಬಾಕಿ ಉಳಿದಿವೆ. ಈ ಕಾಮಗಾರಿಗಳು ಪೂರ್ಣಗೊಂಡರೆ ಮಾತ್ರ ಸಾರ್ವಜನಿಕರು ಹಾಗೂ ಸಮುದಾಯದವರು ಸಭಾಭವನವನ್ನು ಸಮರ್ಪಕವಾಗಿ ಬಳಸಲು ಸಾಧ್ಯವಾಗುತ್ತದೆ.
ಬಾಕಿ ಉಳಿದಿರುವ ಎಲ್ಲಾ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲು ಹೆಚ್ಚುವರಿಯಾಗಿ ₹4 ಕೋಟಿ ಅನುದಾನವನ್ನು ತ್ವರಿತವಾಗಿ ಮಂಜೂರು ಮಾಡುವಂತೆ ಮನವಿ ಸಲ್ಲಿಸಿದ್ದರು.
ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರಾದ ಪ್ರತಿಮಾ ರಾಣಿ, ಅಣ್ಣಪ್ಪ ನಕ್ರೆ, ಸುರೇಶ್ ಚೇತನ ಹಳ್ಳಿ ಉಪಸ್ಥಿತರಿದ್ದರು.
















































