
ಡೆಹ್ರಾಡೂನ್: ಉತ್ತರಾಖಂಡದ ಪ್ರಮುಖ ಧಾರ್ಮಿಕ ಕೇಂದ್ರಗಳಾದ ಕೇದಾರನಾಥ ಮತ್ತು ಬದರಿನಾಥ ದೇವಾಲಯಗಳಿಗೆ ಹಿಂದೂಯೇತರರಿಗೆ ಪ್ರವೇಶಕ್ಕೆ ನಿರ್ಬಂಧ ವಿಧಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಂಗಳವಾರ ಕೇದಾರನಾಥ ಮತ್ತು ಬದರಿನಾಥ ದೇವಾಲಯ ಸಮಿತಿ ನಡೆಸಿದ ಸಭೆಯಲ್ಲಿ ಈ ಕುರಿತು ಒಮ್ಮತದ ತೀರ್ಮಾನ ಕೈಗೊಳ್ಳಲಾಗಿದೆ. ಮುಂದಿನ ತಿಂಗಳಿಂದ ಆರಂಭವಾಗುವ ತೀರ್ಥಯಾತ್ರೆ ಸಮಯದಿಂದ ಈ ನಿಯಮ ಜಾರಿಗೆ ಬರಲಿದೆ ಎಂದು ತಿಳಿಸಲಾಗಿದೆ.
ಹೊಸ ನಿಯಮದ ಪ್ರಕಾರ ಹಿಂದೂ ಧರ್ಮಕ್ಕೆ ಸೇರದವರು ದೇವಾಲಯದ ಆವರಣ ಹಾಗೂ ಗರ್ಭಗುಡಿಗೆ ಪ್ರವೇಶಿಸಲು ಅವಕಾಶ ಇರುವುದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.









