
ಕಾರ್ಕಳ : ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ,
ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕಾರ್ಕಳ ಇವರ
ಸಹಯೋಗದಲ್ಲಿ ಶ್ರೀಮದ್ ಭುವನೇಂದ್ರ ಪ್ರೌಢಶಾಲೆ
ಕಾರ್ಕಳ ಇಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಪ್ರಾಥಮಿಕ
ಶಾಲಾ ವಿಭಾಗದ ಬಾಲಕರ ಕ್ರಿಕೆಟ್ ಪಂದ್ಯಾಟದಲ್ಲಿ ಕಾರ್ಕಳ
ಕ್ರೈಸ್ಟ್ ಕಿಂಗ್ಆಂಗ್ಲಮಾಧ್ಯಮ ಪ್ರಾಥಮಿಕ ಶಾಲೆಯ
ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಉಡುಪಿ ಜಿಲ್ಲಾ ಮಟ್ಟದ
ಕ್ರಿಕೆಟ್ ಪಂದ್ಯಾಟಕ್ಕೆ ಆಯ್ಕೆಗೊಂಡಿದೆ. ದೈಹಿಕ ಶಿಕ್ಷಣ ಶಿಕ್ಷಕ
ಪ್ರಕಾಶ್ ನಾಯ್ಕ್ ತಂಡವನ್ನು ತರಬೇತುಗೊಳಿಸಿದ್ದರು.








































