
ಕಾರ್ಕಳ: ಇಲ್ಲಿನ ಕ್ರೈಸ್ಟ್ ಕಿಂಗ್ ಆಂಗ್ಲಮಾಧ್ಯಮ
ಪ್ರೌಢಶಾಲೆಯ ಒಂಬತ್ತನೇ ತರಗತಿಯ ವಿದ್ಯಾರ್ಥಿನಿ
ಶಗುನ್ ಎಸ್. ವರ್ಮ ಹೆಗ್ಡೆ ರಾಷ್ಟ್ರೀಯ ಸ್ಕೂಲ್ ಗೇಮ್ಸ್
ಫೆಡರೇಶನ್ನವರು ನಡೆಸುವ 15ರ ವಯೋಮಿತಿಯ
ವಿಶ್ವಶಾಲಾ ಮಕ್ಕಳ ಬಾಲಕಿಯರ ವಿಭಾಗದ ವಾಲಿಬಾಲ್
ಚಾಂಪಿಯನ್ಶಿಪ್ ಪಂದ್ಯಾವಳಿಯ ಭಾರತ ರಾಷ್ಟ್ರೀಯ
ತಂಡದ ನಾಯಕಿಯಾಗಿ ಆಯ್ಕೆಯಾಗಿದ್ದಾಳೆ. ಇವಳು 15ರ
ವಯೋಮಿತಿಯ ಭಾರತೀಯ ವಾಲಿವಾಲ್ ತಂಡಕ್ಕೆ
ಆಯ್ಕೆಯಾದ ಕರ್ನಾಟಕದ ಏಕೈಕ ಆಟಗಾರ್ತಿ.
ಅಂತರಾಷ್ಟ್ರೀಯ ಪಂದ್ಯವು ಇದೇ ಡಿಸೆಂಬರ್ ತಿಂಗಳ 3 ರಿಂದ
13ನೇ ತಾರೀಖಿನವರೆಗೆ ಚೀನಾದ ಶಾಂಗ್ಲೋದಲ್ಲಿ
ನಡೆಯಲಿದ್ದು ಶಗುನ್ ಎಸ್ ವರ್ಮ ಹೆಗ್ಡೆ ಭಾರತ
ತಂಡವನ್ನು ಪ್ರತಿನಿಧಿಸುವ ಕಾರ್ಕಳದ ಹೆಮ್ಮೆಯ
ಕ್ರೀಡಾಪಟುವಾಗಿದ್ದಾಳೆ. ಈಕೆ ಕಲ್ಲೊಟ್ಟೆ ನಿವಾಸಿ ಸಂದೇಶ್
ವರ್ಮ ಹಾಗೂ ಶ್ರುತಿರಾಜ್ ದಂಪತಿಗಳ
ಸುಪುತ್ರಿಯಾಗಿದ್ದಾಳೆ.





