
ಬೆಂಗಳೂರು : ಮುಂಗಾರು ಮಳೆಯ ಆರ್ಭಟವು ಅನೇಕ ಅವಾಂತರಗಳು ಸೃಷ್ಟಿಸಿದ್ದು ನೂರಾರು ಮರಗಳು ನೆಲ ಕಚ್ಚಿವೆ. ಚಿಕ್ಕಮಗಳೂರು ಹಾಗೂ ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಮರಗಳು ಬಿದ್ದು NH-73 ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.
ವಿದ್ಯುತ್ ಸಂಪರ್ಕವೂ ಕೂಡ ಕಡಿತಗೊಂಡಿದ್ದು ಅವಾಂತರವೇ ಆಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಜೋಕಟ್ಟೆ ಬಳಿ ಮನೆ ಪಕ್ಕದ ತಡೆಗೋಡೆ ಕುಸಿದು ಸಂಭವಿಸಿದ ಅವಘಡದಲ್ಲಿ ಮೂಲ್ಕಿ ಕೊಲ್ನಾಡಿನ ಲಿಂಗಪ್ಪಯ್ಯ ಕಾಡು ನಿವಾಸಿ ಶೈಲೇಶ್(17) ಮೃತಪಟ್ಟಿದ್ದಾರೆ.ಇನ್ನು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬಳ್ಕೂರಿನಲ್ಲಿ ಮನೆಯ ಮೇಲೆ ಮರ ಬಿದ್ದು ಹಾನಿಯಾಗಿದೆ. ಮನೆಯವರು ಹೇಗಾದರೂ ಮಾಡಿ ನಮಗೆ ಪರಿಹಾರ ಕೊಡಿಸಿ ಅಳಲು ತೋಡಿಕೊಳ್ಳುತ್ತಿದ್ದಾರೆ.











