
ಶ್ರೀನಗರ: ಬುಧವಾರ ರಾತ್ರಿ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಮತ್ತು ಎಲ್ಇಟಿ ಕಮಾಂಡರ್ ಸೇರಿ ಮೂವರ ಎನ್ಕೌಂಟರ್ ಮಾಡಲಾಗಿದೆ.
ಸೋಮವಾರ ತಡರಾತ್ರಿ ದಕ್ಷಿಣ ಕಾಶ್ಮೀರದ ಕುಲ್ಗಾಮ್ನ ರೆಡ್ವಾನಿ ಪಯೀನ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಭಯೋತ್ಪಾದಕರ ಹತ್ಯೆಯಾಗಿದೆ.
ರೆಡ್ವಾನಿ ಪಯೀನ್ನ ನಿವಾಸಿ ಬಸಿತ್ ಅಹ್ಮದ್ ದಾರ್, ಲಷ್ಕರ್-ಎ-ತೈಬಾ (ಎಲ್ಇಟಿ) ಆಫ್ಶೂಟ್ ಗ್ರೂಪ್ ಮತ್ತು ದಿ ರೆಸಿಸ್ಟೆಂಟ್ ಫ್ರಂಟ್ (ಟಿಆರ್ಎಫ್)ನ ಕಮಾಂಡರ್ ಆಗಿದ್ದ ನಾಗರಿಕರು ಮತ್ತು ಭದ್ರತಾ ಸಿಬ್ಬಂದಿಯ ಹತ್ಯೆಗಳಲ್ಲಿ ಭಾಗಿಯಾಗಿದ್ದು ದಾರ್ ಜೊತೆ ಹತ್ಯೆಗೊಳಗಾದ ಇಬ್ಬರು ಎಲ್ಇಟಿ ಭಯೋತ್ಪಾದಕರು ಮೋಮಿನ್ ಗುಲ್ಜಾರ್ ಮತ್ತು ಫಾಹಿಮ್ ಅಹ್ಮದ್ ಬಾಬಾ ಎಂದು ಗುರುತಿಸಲಾಗಿದೆ.
ಕಾಶ್ಮೀರದ ಪೊಲೀಸ್ ಮಹಾನಿರೀಕ್ಷಕ ವಿ ಕೆ ಬಿರ್ಡಿ ಮಾತನಾಡಿ 18 ಹತ್ಯೆಗಳಲ್ಲಿ ಭಾಗಿಯಾಗಿದ್ದವರನ್ನು ಎನ್ಕೌಂಟರ್ ಮಾಡಿರುವುದು ನಮಗೆ ದೊಡ್ಡ ಸಾಧನೆಯಾಗಿದೆ. ಈ ಕಾರ್ಯಾಚರಣೆಯಲ್ಲಿ ಭದ್ರತಾ ಸಿಬ್ಬಂದಿ, ನಾಗರಿಕರು ಮತ್ತು ಅಲ್ಪಸಂಖ್ಯಾತರು ಸೇರಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ