
ಜೆಸಿಐ ಭಾರತದ ಆದೇಶದಂತೆ ಅಕ್ಟೋಬರ್ 9 ರಿಂದ 15ರವರೆಗೆ ಜೆಸಿಐ ಸಪ್ತಾಹದ ಹಬ್ಬದ ಆಚರಣೆಯನ್ನು ಜೆಸಿಐ ಕಾರ್ಕಳ ಆಚರಿಸುತ್ತಿದೆ. ಸುತ್ತೋಲೆಯಂತೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು , ಇಂದು ಜೇಸಿ ಇಂಟರ್ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೆಸಿಐ ಧ್ವಜದ ದ್ವಜಾರೋಹಣದೊಂದಿಗೆ ಜೆಸಿಐ ಕಾರ್ಕಳದ ಪೂರ್ವಾಧ್ಯಕ್ಷರು ಶಶಿಧರ್ ಕೆ ಅವರು ವಿಧ್ಯುಕ್ತವಾಗಿ ಚಾಲನೆ ಮಾಡಿ ಶುಭ ಹಾರೈಸಿದರು. ಮ್ಯಾರಥಾನ್ , ಪ್ರೆಸ್ ಮೀಟ್, ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಆರೋಗ್ಯ ತಪಾಸಣೆ, ತರಬೇತಿ ಕಾರ್ಯಕ್ರಮ, ಆಟೋಟ ಸ್ಪರ್ಧೆಗಳು, ಮನರಂಜನೆ ಕಾರ್ಯಕ್ರಮಗಳು, ವ್ಯವಹಾರ ಪ್ರಚಾರ ಕಾರ್ಯಕ್ರಮಗಳು, ಹಾಗೂ ಇನ್ನಿತರ ವಿಶೇಷ ಕಾರ್ಯಕ್ರಮಗಳನ್ನು ಒಂದು ವಾರಗಳ ಕಾಲ ನಿರಂತರವಾಗಿ ಮಾಡಲಾಗುತ್ತಿದೆ.
ವೇದಿಕೆಯಲ್ಲಿ ಜೆಸಿಐ ಕಾರ್ಕಳದ ಅಧ್ಯಕ್ಷೆ ಶ್ವೇತಾ ಎಸ್ ಜೈನ್, ಪೂರ್ವ ವಲಯ ಅಧ್ಯಕ್ಷ ಚಿತ್ತರಂಜನ್ ಶೆಟ್ಟಿ, ವಲಯ ನಿರ್ದೇಶಕ ವಿಘ್ನೇಶ್ ಪ್ರಸಾದ್, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಸುರೇಖಾ ರಾಜ್, ನಿಕಟ ಪೂರ್ವ ಅಧ್ಯಕ್ಷ ಪ್ರಚಿತ್ ಕುಮಾರ್ ಕಾರ್ಯಕ್ರಮ ಸಂಯೋಜಕ ಸುಶಾಂತ್ ಶೆಟ್ಟಿ, ಕಾರ್ಯದರ್ಶಿ ಸುಶ್ಮಿತಾ ರಾವ್, ಲೇಡಿ ಜೆಸಿ ನಿರ್ದೇಶಕಿ ಶಾಹಿನ್ ರಿಜ್ವಾನ್ ಖಾನ್ , ಹಾಗೂ ಕಾರ್ಯಕ್ರಮದಲ್ಲಿ ಶಿಕ್ಷಕರು, ಮಕ್ಕಳು, ಜೇಸಿ ಸದಸ್ಯರು ಉಪಸ್ಥಿತರಿದ್ದರು.




















