
ಅಬಕಾರಿ ಕಾಯ್ದೆಯ ಹಗರಣಕ್ಕೆ ಸಂಬಂಧಿಸಿದಂತೆ ಮಾರ್ಚ್ ತಿಂಗಳಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯವೂ ಬಂಧಿಸಿದ್ದು ಆದರೆ ಚುನಾವಣೆಯ ಸಮಯದಲ್ಲಿ ಕೆಲ ದಿನ ಬೇಲ್ ಮೇಲೆ ಹೊರಗಿದ್ದ ಅರವಿಂದ್ ಕೇಜ್ರಿವಾಲ್ ಜೂನ್ 2 ರಂದು ಮತ್ತೆ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ಮತ್ತೆ ಜೈಲಿಗೆ ಶರಣಾಗಿದ್ದರು. ಈಗ ದೆಹಲಿ ನ್ಯಾಯಾಲಯವೂ ಈ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು ಮಾಡಿದ್ದು ಹೀಗಾಗಿ ಇಂದು ಅರವಿಂದ್ ಕೇಜ್ರಿವಾಲ್ ಬಿಡುಗಡೆಯಾಗುವ ಸಾಧ್ಯತೆ ಇದೆ. ಹೀಗಾಗಿ ದೆಹಲಿ ಕೋರ್ಟ್ ಜಾಮೀನು ಮಂಜೂರು ಮಾಡಿರುವುದರಿಂದ ಆಮ್ ಆದ್ಮಿ ಪಕ್ಷ ಹಾಗೂ ದೆಹಲಿ ಸಿಎಂಗೆ ದೊಡ್ಡ ರಿಲೀಫ್ ಸಿಕ್ಕಂತಾಗಿದೆ.
ಈ ಕುರಿತು ಎಎಪಿ ನಾಯಕರು ಪ್ರತಿಕ್ರಿಯಿಸಿದ್ದು, ಬಹುಶಃ ಸತ್ಯಕ್ಕೆ ತೊಂದರೆಯಾಗಬಹುದು ಆದರೆ ಸತ್ಯ ಯಾವತ್ತೂ ಸೋಲುವುದಿಲ್ಲ. ಬಿಜೆಪಿಯ ಜಾರಿ ನಿರ್ದೇಶನಾಲಯದ ಎಲ್ಲಾ ಆಕ್ಷೇಪಗಳನ್ನು ನಿರಾಕರಿಸಿ ಗೌರವಾನ್ವಿತ ನ್ಯಾಯಾಲಯವೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ನೀಡಿದೆ ಎಂದು ಟ್ವೀಟ್ ಮಾಡಿದೆ.