
ನವದೆಹಲಿ: ವಿಶ್ವ ಹಿಂದೂ ಪರಿಷತ್ ಸಾಲು ಸಾಲು ಹೆಸರುಗಳು ಮರುನಾಮಕರಣ ಮಾಡಬೇಕು ಎಂದು ದೆಹಲಿ ಸರ್ಕಾರಕ್ಕೆ ರಾಷ್ಟ್ರ ರಾಜಧಾನಿ ಹೆಸರು ದೆಹಲಿ ಅಲ್ಲ, ಅದು ಇಂದ್ರಪ್ರಸ್ಥ. ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಇಂದ್ರಪ್ರಸ್ಥ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಶಹಜಹಾನಬಾದ್ ಡೆವಲಪ್ಮೆಂಟ್ ಬೋರ್ಡ್ ಬದಲು ಇಂದ್ರಪ್ರಸ್ಥ ಡೆವಲಪ್ಮೆಂಟ್ ಬೋರ್ಡ್ ಹೀಗೆ ಮರುನಾಮಕರಣಕ್ಕೆ ಒಂದಿಷ್ಟು ಕಾರಣಗಳನ್ನು ಪತ್ರದ ಮೂಲಕ ನೀಡಿದೆ.
ಯಾವೆಲ್ಲಾ ಹೆಸರು ಬದಲಾವಣೆಯಾಗಬೇಕು, ಹೊಸ ಹೆಸರು ಯಾವುದು ಅನ್ನೋ ಕುರಿತು ಈ ಪತ್ರದಲ್ಲಿ ಉಲ್ಲೇಖಿಸಲಾಗಿದ್ದು ದೆಹಲಿ ಸಂಸ್ಕೃತಿ ಸಚಿವ ಕಪಿಲ್ ಮಿಶ್ರಾಗೆ ಸಲ್ಲಿಕೆ ಮಾಡಿರುವ ಈ ಪತ್ರ ಇದೀಗ ಬಾರಿ ಸಂಚಲನ ಸೃಷ್ಟಿಸಿದೆ.
ವಿಶ್ವ ಹಿಂದೂ ಪರಿಷತ್ ದೆಹಲಿ ಪ್ರಾಂತ ಕಾರ್ಯದರ್ಶಿ ಸುರೇಂದ್ರ ಕುಮಾರ್ ಗುಪ್ತ, ದೆಹಲಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಹೆಸರು ಬದಲಿಸಲು ಕಾರಣಗಳನ್ನು ಸೂಚಿಸಿದ ವಿಶ್ವ ಹಿಂದೂ ಪರಿಷತ್ ಮಹಾಭಾರತ ಕಾಲದಲ್ಲಿ ಇಂದ್ರಪ್ರಸ್ಥ (ಈಗಿನ ದೆಹಲಿ ) ನಳನಳಿಸುತ್ತಿತ್ತು. ಹಿಂದೂ ರಾಜರು ದೇವಸ್ಥಾನ, ಕೋಟೆಗಳಿಂದ ಸುತ್ತುವರಿದ ಪ್ರದೇಶವಾಗಿತ್ತು. ಆದರೆ ಈ ಇತಿಹಾಸ ಮರೆಮಾಚಿ ಇದೀಗ ದಾಳಿಕೋರರ ಇತಿಹಾಸವನ್ನೇ ಎಲ್ಲೆಡೆ ಪ್ರದರ್ಶಿಸಲಾಗಿದೆ. ಇಂದ್ರಪ್ರಸ್ಥ ನೈಜ ಇತಿಹಾಸವನ್ನು ಮರೆಮಾಚಿ ದಾಳಿಕೋರರ ಇತಿಹಾಸ, ಅವರ ಹೆಸರು, ಅವರ ಸಾಧನೆಗಳನ್ನೇ ಹೇಳುವ ಪ್ರಯತ್ನ ಮಾಡಲಾಗಿದೆ. ಇದರಿಂದ ದೆಹಲಿಯ ಅಸಲಿ ಇತಿಹಾಸ ಹುದುಗಿಹೋಗಿದೆ. ಮುಸ್ಲಿಮ್ ದಾಳಿಕೋರರಿಂದ ನಶಿಸಿರುವ ಹಿಂದೂ ಪುರಾಣ ಸ್ಥಳಗಳನ್ನು ಮತ್ತೆ ವೈಭವದಿಂದ ಕಟ್ಟಬೇಕು. ದೆಹಲಿ ಅಲ್ಲ ಇಂದ್ರಪ್ರಸ್ಥ ನಮ್ಮ ಅಸ್ಮಿತೆಯ ಭಾಗ. ನಮ್ಮ ಇತಿಹಾಸ, ಪರಂಪರೆಯ ಬಾಗ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ರಾಜಾ ಹೇಮಚಂದ್ರ ವಿಕ್ರಮಾದಿತ್ಯನ ಹೆಸರಿನಲ್ಲಿ ಮೆಮೋರಿಯಲ್, ರಾಜಾ ವಿಕ್ರಮಾದಿತ್ಯ ಮಿಲಿಟರಿ ಶಾಲೆಗಳು ಆರಂಭಿಸಬೇಕು. ರಾಜಾ ವಿಕ್ರಮಾದಿತ್ಯ ಹಾಗೂ ಇಂದ್ರಪ್ರಸ್ಥನ ಸಂಬಂಧ ಪಾಂಡವರ ಕಾಲದಿಂದ ಇದೆ. ಆದರೆ ದಾಳಿಗಳಿಂದ, ಬಳಿಕ ನಮ್ಮ ತಪ್ಪುಗಳಿಂದ ಇತಿಹಾಸ ಮರೆತು ದಾಳಿಕೋರರ ವಿಜ್ರಂಭವಿಸುವ ಇತಿಹಾಸ ಸೃಷ್ಟಿಸಲಾಗಿದೆ. ಈ ಪತ್ರವನ್ನು ದೆಹಲಿಯ ಇತಿಹಾಸಕಾರರು, ಚಿಂತಕರು ಸೇರಿದಂತೆ ಹಲವರು ಚರ್ಚೆ ನಡೆಸಿ ಬಳಿಕ ಬರೆದು ಕಳುಹಿಸಲಾಗಿದೆ. ದಯವಿಟ್ಟು ಈ ಮನವಿ ಸ್ವೀಕರಿಸಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.











