
ಬೆಂಗಳೂರು: ನ.13 ರಂದು ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ರಾಜ್ಯದಲ್ಲಿ ಬಾಕಿಯಿರುವ ಎಲ್ಲಾ ವಾಹನ ನೋದಣಿ ಅರ್ಜಿಗಳನ್ನು ಪೂರ್ಣಗೊಳಿಸುವಂತೆ ಆರ್ಟಿಓ ಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಅರ್ಜಿಗಳ ಡಿಜಿಟಲೀಕರಣದಲ್ಲಿ ಕೆಲವು ಸಾಫ್ಟ್ವೇರ್ ದೋಷಗಳು ಎದುರಾಗಿದ್ದು, ಇಲಾಖೆ ಆ ದೋಷಗಳನ್ನು ಸರಿಪಡಿಸುವ ಪ್ರಯತ್ನದಲ್ಲಿದೆ ಎಂದು ಸಾರಿಗೆ ಇಲಾಖೆಯ ಅಧಿಕಾರಿ ತಿಳಿಸಿದ್ದು ಇದಕ್ಕೆ ಉತ್ತರಿಸಿದ ಸಚಿವರು ರಾಜ್ಯಾದ್ಯಂತ ಸಾಕಷ್ಟು ನೋಂದಣಿ ಅರ್ಜಿಗಳು ಬಾಕಿ ಇವೆ. ಅದರ ಜೊತೆಗೆ ಶೇ. 50 ರಷ್ಟು ಹೊಸ ನೋಂದಣಿ ಅರ್ಜಿಗಳು ಸಲ್ಲಿಕೆಯಾಗಿವೆ. ನವೆಂಬರ್ 30ರೊಳಗೆ ಈ ಎಲ್ಲಾ ಅಜಿರ್ಗಳನ್ನು ಪರಿಶೀಲಿಸಿ ಇತ್ಯರ್ಥಪಡಿಸಬೇಕು ಎಂದು ಸೂಚಿಸಿದ್ದಾರೆ.






















































