
ಹುಬ್ಬಳ್ಳಿ: ಭಾನುವಾರ ಮೃತ ನೇಹಾ ಹಿರೇಮಠ ತಂದೆ, ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಲೋಹಿಯಾ ನಗರದಲ್ಲಿ ಶನಿವಾರ ರಾತ್ರಿ ಕೊಲೆಗೀಡಾಗಿದ್ದ ಆಟೋ ಚಾಲಕ ಸಂಘದ ಅಧ್ಯಕ್ಷ ಶೇಖರಯ್ಯ ಮಠಪತಿ ಪುತ್ರ ಆಕಾಶ ಮಠಪತಿ ಅವರ ಶವವನ್ನು ನೋಡಲು ಕಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿದ ವೇಳೆ ವೇಳೆ ಅವರನ್ನು ಪೊಲೀಸರು ತಡೆದಿದ್ದಾರೆ. ಇದರಿಂದ ಕೋಪಗೊಂಡ ನಿರಂಜನ್ ಹಿರೇಮಠ್ ‘ನಮ್ಮ ಸಮಾಜದ ವ್ಯಕ್ತಿಯ ಕೊಲೆಯಾಗಿದೆ. ಅವನನ್ನು ನೋಡಲು ಹೋಗುತ್ತಿದ್ದರೆ ಪೊಲೀಸರು ತಡೆಯುತ್ತಿದ್ದಾರೆ. ಪದೇ ಪದೇ ಈ ರೀತಿಯ ತೊಂದರೆ ಕೊಡುತ್ತಿದ್ದರೆ ನಾನು ವಿಷ ಸೇವಿಸುತ್ತೇನೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶವಗಾರಕ್ಕೆ ತೆರಳುತ್ತಿದ್ದ ವೇಳೆ ನಿರಂಜನ್ ಹಿರೇಮಠ ಅವರನ್ನು ಪೊಲೀಸರು ತಡೆದು, ನೀವು ಶವಾಗಾರಕ್ಕೆ ಹೋಗಬೇಡಿ ಎಂದಿದ್ದು ಪೊಲೀಸರು ಮತ್ತು ನಿರಂಜನೆ ನಡುವೆ ವಾಗ್ವಾದ ನಡೆದಿದ್ದು ನನ್ನ ಮೇಲೆ ಒತ್ತಡ ಹಾಕಿ ಪೊಲೀಸರು ಬಂಧನ ಮಾಡಲು ಮುಂದಾಗಿದ್ದಾರೆ ಎಂದು ಕಿಡಿ ಕಾರಿದ್ದಾರೆ.