
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್( ರಿ ) ಉಡುಪಿ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ ಹಾಗೂ ಪೆರ್ಡೂರು ಪ್ರೌಢಶಾಲೆ, ಪೆರ್ಡೂರು ಇವರ ಜಂಟಿ ಆಶ್ರಯದಲ್ಲಿ ಇಂದು ಪೆರ್ಡೂರು ಪ್ರೌಢಶಾಲೆಯಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಸತೀಶ್ ಶೆಟ್ಟಿ ಕುತ್ಯಾರು ಬೀಡು ಇವರು ನೆರವೇರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಸೀನ ಬಾನು, ಶಿಕ್ಷಕರು ಪೆರ್ಡೂರು ಪ್ರೌಢಶಾಲೆ ಇವರು ವಹಿಸಿಕೊಂಡಿದ್ದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಶ್ರೀ ಸಂತೋಷ್ ಹೆಡ್ ಕಾನ್ಸ್ಟೇಬಲ್ , ಎಸ್ ಪಿ ಕಚೇರಿ ಉಡುಪಿ ಇವರು ವಿದ್ಯಾರ್ಥಿ ಜೀವನದಲ್ಲಿ ದಾರಿ ತಪ್ಪುವ ಕಾರಣಗಳು, ಪರಿಣಾಮಗಳುಬಗ್ಗೆ ತಿಳಿಸಿ ದರು.ಯಾವ ರೀತಿ ಯುವ ಜನತೆ ಎಚ್ಚೆತ್ತುಕೊಂಡು ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ಹೊರಹೊಮ್ಮಬಹುದು ಎಂಬ ಬಗ್ಗೆ ಉದಾಹರಣೆಗಳ ಮೂಲಕ ವಿವರಿಸಿದರು. ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಡ್ರಗ್ ಮಾದಕ ವಸ್ತುಗಳ ಸೇವನೆಯಿಂದ ಅಪರಾಧಗಳು ನಡೆಯುತ್ತಿದ್ದು, ವಿದ್ಯಾರ್ಥಿ ಜೀವನದಲ್ಲಿ ವಿದ್ಯಾರ್ಥಿ ಜೀವನದಲ್ಲಿ, ದೃಢ ನಿರ್ಧಾರ, ಉತ್ತಮ ಚಿಂತನೆಗಳ ಮೂಲಕ ಸುಧಾರಣೆ ಸಾಧ್ಯವಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀಮತಿ ಲಲಿತಾ, ಅಧ್ಯಕ್ಷರು ಕಾಫಿ ತೋಟ,ಒಕ್ಕೂಟ ಇವರು ಉಪಸ್ಥಿತರಿದ್ದರು, ಕಾರ್ಯಕ್ರಮದ ನಿರೂಪಣೆಯನ್ನು ಮನೋರಮ ವಲಯದ ಮೇಲ್ವಿಚಾರಕರು, ಸ್ವಾಗತವನ್ನು ಸೇವಾಪ್ರತಿನಿಧಿ ಅಶೋಕ್ ಹಾಗೂ ಸೇವಾ ಪ್ರತಿನಿಧಿ ಯಶೋಧರವರು ಧನ್ಯವಾದ ಕಾರ್ಯಕ್ರಮ ನಡೆಸಿಕೊಟ್ಟರು.





















































