
ಉಡುಪಿ: ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾ ಕುಮಾರಿ ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಿದ ಅಕ್ರಮ ಬಾಂಗ್ಲಾದೇಶಿಯ ವಲಸೆ ಕಾರ್ಮಿಕರಿಗೆ ಹಾಗೂ ನಾಗರಿಕರಿಗೆ ಸಂಬಂಧಿಸಿ ವಿವಿಧ ಸಂಸ್ಥೆಗಳ ಮೂಲಕ ಜಿಲ್ಲೆಯ ಜನರನ್ನು ಜಾಗೃತಗೊಳಿಸುವ ಸಭೆಯಲ್ಲಿ ಮಾತನಾಡಿ ಕಾರ್ಮಿಕರ ಸೇವೆಯನ್ನು ಪಡೆಯಲು ಕೆಲಸಗಾರರನ್ನು ನಿಯೋಜಿಸಿಕೊಳ್ಳುವ ಪ್ರತಿಯೊಬ್ಬ ಮಾಲಕರು ಅವರ ಗುರುತಿನ ಚೀಟಿ ಶಾಶ್ವತ ಹಾಗೂ ತಾತ್ಕಾಲಿಕ ವಾಸಸ್ಥಾನದ ವಿವರಗಳನ್ನು ಕಡ್ಡಾಯವಾಗಿ ಪಡೆದುಕೊಂಡು ಸಂಬಂಧಿಸಿದ ಸರಕಾರಿ ಕಚೇರಿಗಳಿಗೆ ತಪ್ಪದೇ ನೀಡಬೇಕು ಎಂದು ತಿಳಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಅಕ್ರಮವಾಗಿ ಬಾಂಗ್ಲಾದೇಶದ ಕಾರ್ಮಿಕರು ಜಿಲ್ಲೆಯ ವಿವಿಧ ಕೆಲಸಗಳಲ್ಲಿ ತೊಡಗಿರುವ ಬಗ್ಗೆ ದೂರುಗಳು ಕೇಳಿಬಂದಿದ್ದು ಅಲ್ಲದೆ ಸ್ಥಳೀಯವಾಗಿ ಕೆಲವು ನಕಲಿ ದಾಖಲೆಗಳನ್ನು ಸೃಷ್ಟಿಸಿಕೊಂಡು ವಾಸವಿದ್ದರೆ ಈ ಕುರಿತು ಎಚ್ಚರ ವಹಿಸಲು ಸರ್ಕಾರವು ನಿರ್ದೇಶನ ನೀಡಿದೆ.






















































