
ನವದೆಹಲಿ: ಆರೆಸ್ಸೆಸ್ ಮುಖಂಡ ಇಂದ್ರೇಶ್ ಕುಮಾರ್ ಈ ಹಿಂದೆ ಬಿಜೆಪಿಗರು ಅಹಂಕಾರಿಗಳು, ರಾಮಮಂದಿರ ನಿರ್ಮಿಸಿದರೂ, ತಮ್ಮ ಅಹಂಕಾರದಿಂದ 241ಕ್ಕೇ ಸ್ತಬ್ಧರಾದರು. ರಾಮ ವಿರೋಧಿಗಳಿಗೆ 2ನೇ ಸ್ಥಾನ ಲಭಿಸಿತು. ಇವರಿಗೆ ಹೆಚ್ಚು ಮತ ಪಡೆಯದಂತೆ ದೇವರೇ ತಡೆದ’ ಎಂದಿದ್ದ ತಮ್ಮ ಹೇಳಿಕೆ ಹಿಂಪಡೆದು ಕೊಂಡಿದ್ದಾರೆ.
‘ ದೇಶದ ಮೂಡ್ ಈಗ ತುಂಬಾ ಸ್ಪಷ್ಟವಾಗಿದೆ. ಯಾರು ರಾಮನನ್ನು ವಿರೋಧಿಸಿದರೋ ಇಂದು ಅಧಿಕಾರದಲ್ಲಿಲ್ಲ. ಯಾರು ರಾಮನನ್ನು ಗೌರವಿಸಿದರೋ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಅಧಿಕಾರದಲ್ಲಿದ್ದಾರೆ’ ಎಂದು ಸ್ಪಷ್ಟನೆ ನೀಡುವ ಮೂಲಕ ವಿವಾದಕ್ಕೆ ತೆರೆ ಎಳೆದಿದ್ದಾರೆ.