ಉದ್ಯಮ ಕ್ಷೇತ್ರ ಮಾತ್ರವಲ್ಲದೆ, ಧಾರ್ಮಿಕ ಶೈಕ್ಷಣಿಕ ಸಾಮಾಜಿಕ ಕ್ಷೇತ್ರಗಳಿಗೆ ರಮಾನಾಥ್ ಕಾಮತ್ ಕೊಡುಗೆ ಅಪಾರ,ಶಾಸಕ ವಿ. ಸುನಿಲ್ ಕುಮಾರ್ ಸಂತಾಪ

ಕಾರ್ಕಳ ಆ 20: ಕಾರ್ಕಳದ ಖ್ಯಾತ ಉದ್ಯಮಿಗಳು, ಬಿ.ಆರ್.ಕೆ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಬೋಳ ರಮಾನಾಥ ಕಾಮತ್ ಅವರ ನಿಧನಕ್ಕೆ ಕಾರ್ಕಳ ಶಾಸಕರಾದ ವಿ ಸುನಿಲ್ ಕುಮಾರ್ ರವರು ತೀವ್ರ ಸಂತಾಪ ವ್ಯಕ್ತಪಡಿಸಿರುತ್ತಾರೆ.
“ಶ್ರೀಯುತರು ಉದ್ಯಮ ಕ್ಷೇತ್ರದ ಜೊತೆಗೆ ಶ್ರೀ ವೆಂಕಟರಮಣ ಯಕ್ಷಗಾನ ಕಲಾ ಸಮಿತಿಯ ಸಂಚಾಲಕರಾಗಿ ಧಾರ್ಮಿಕ ಹಾಗೂ ಶೈಕ್ಷಣಿಕ ಸೇರಿದಂತೆ ಸಮಾಜಮುಖಿ ಚಟುವಟಿಕೆಗಳಿಗೆ ಅಪಾರ ಕೊಡುಗೆ ನೀಡಿದ್ದರು.ತಮ್ಮ ಸಂಸ್ಥೆಗಳಲ್ಲಿ ಸಾವಿರಾರು ಮಂದಿಗೆ ಉದ್ಯೋಗ ನೀಡುವ ಮೂಲಕ ಅವರ ಬದುಕಿಗೆ ಆಸರೆಯಾಗಿದ್ದರು.ಮೃತರ ಆತ್ಮಕ್ಕೆ ಚಿರಶಾಂತಿ ಕೋರುತ್ತಾ, ಭಗವಂತನು ಅವರ ಕುಟುಂಬ ಹಾಗೂ ಬಂಧು-ಮಿತ್ರರಿಗೆ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಕರುಣಿಸಲಿ. “ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.













