32.5 C
Udupi
Wednesday, April 30, 2025
spot_img
spot_img
HomeBlogಬೆಂಗಳೂರು ಸೇರಿದಂತೆ ಭಾರತದ ಪ್ರಮುಖ ನಗರಗಳಲ್ಲಿ ಉಷ್ಣಾಘಾತದಿಂದ ಸಾವುಗಳ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ: ವರದಿ ಬಿಡುಗಡೆ

ಬೆಂಗಳೂರು ಸೇರಿದಂತೆ ಭಾರತದ ಪ್ರಮುಖ ನಗರಗಳಲ್ಲಿ ಉಷ್ಣಾಘಾತದಿಂದ ಸಾವುಗಳ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ: ವರದಿ ಬಿಡುಗಡೆ

ಬೆಂಗಳೂರು: ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ಭಾರತದ ಪ್ರಮುಖ ನಗರಗಳಿಗೆ ಸಂಬಂಧಿಸಿ ಆಘಾತಕಾರಿ ವರದಿಯೊಂದು ಬಿಡುಗಡೆಯಾಗಿದ್ದು ಅದೇನೆಂದರೆ ಉಷ್ಣಾಘಾತಕ್ಕೆ ಸಂಬಂಧಿಸಿದ ಸಾವುಗಳ ಸಂಖ್ಯೆ ಬೆಂಗಳೂರು ಸೇರಿದಂತೆ ಭಾರತದ ನಗರಗಳಲ್ಲಿ ಹೆಚ್ಚಾಗಬಹುದು ಎಂದು ಅಧ್ಯಯನ ವರದಿ ಬಹಿರಂಗಪಡಿಸಿದೆ.

ಕಿಂಗ್ಸ್ ಕಾಲೇಜ್ ಲಂಡನ್, ಹಾರ್ವರ್ಡ್ ವಿಶ್ವವಿದ್ಯಾಲಯ, ಪ್ರಿನ್ಸ್‌ಟನ್ ವಿಶ್ವವಿದ್ಯಾಲಯ ಮತ್ತು ಬರ್ಕ್ಲಿಯ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ ಸಂಶೋಧಕರು ಜಂಟಿಯಾಗಿ ಅಧ್ಯಯನ ನಡೆಸಿ ಮುಂಬರುವ ವರ್ಷಗಳಲ್ಲಿ ಭಾರತದ ನಗರಗಳಲ್ಲಿ ಉಷ್ಣ ಅಲೆ ಮುಂದುವರೆಯಲಿದೆ. ಇದಕ್ಕೆ ತಕ್ಷಣವೇ ದೀರ್ಘಾವಧಿಯ ಪರಿಹಾರಗಳನ್ನು ಕಂಡುಕೊಳ್ಳಬೇಕಿದೆ. ಇಲ್ಲವಾದಲ್ಲಿ ತಾಪಮಾನ ಸಂಬಂಧಿ ಸಾವುಗಳ ಸಂಖ್ಯೆಯಲ್ಲಿ ಹೆಚ್ಚಳವಾಗಬಹುದು ಎಂದು ವರದಿ ತಿಳಿಸಿದೆ.

ಹವಾಮಾನ ಮಾದರಿಗಳ ಆಧಾರದಲ್ಲಿ ಮಾಡಲಾದ ಅಧ್ಯಯನ ವರದಿಯಲ್ಲಿ, 2011ರ ಜನಗಣತಿ ಪ್ರಕಾರ 10 ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆಯುಳ್ಳ ಬೆಂಗಳೂರು, ದೆಹಲಿ, ಫರೀದಾಬಾದ್, ಗ್ವಾಲಿಯರ್, ಕೋಟ, ಲುಧಿಯಾನ, ಮೀರತ್, ಸೂರತ್ ನಗರಗಳನ್ನು ಹೆಸರಿಸಲಾಗಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page