
ಚೆನ್ನೈ: ತಮಿಳುನಾಡಿನಲ್ಲಿ ದೇವಸ್ಥಾನದ ಹುಂಡಿಗೆ ಭಕ್ತರೊಬ್ಬರು ಕಾಣಿಕೆ ಹಾಕುವಾಗ ಆಕಸ್ಮಿಕವಾಗಿ ಅವರ ಐಫೋನ್ ಹುಂಡಿಗೆ ಬಿದ್ದಿದ್ದು ಆದರೆ ಈ ಕುರಿತು ದೇಗುಲದ ಆಡಳಿತ ಮಂಡಳಿ ಬಳಿ ವಿಚಾರಿಸಿದಾಗ ಐಫೋನ್ ಹಿಂದಿರುಗಿಸಲ್ಲ ಎಂದು ಹೇಳಿರುವ ಘಟನೆ ನಡೆದಿದೆ.
ತಮಿಳುನಾಡಿನ ವಿನಾಯಕಪುರಂ ನಿವಾಸಿ ದಿನೇಶ್ ಚೆನ್ನೈನ ತಿರುಪೋರೂರಿನ ಕಂದಸ್ವಾಮಿ ದೇಗುಲಕ್ಕೆ ಕಳೆದ ತಿಂಗಳು ಭೇಟಿ ನೀಡಿದ್ದ ವೇಳೆ ಹುಂಡಿಗೆ ಹಣ ಹಾಕುವ ಸಂದರ್ಭದಲ್ಲಿ ಆಕಸ್ಮಿಕ ಐಫೋನ್ ಕೂಡ ಹುಂಡಿಗೆ ಬಿದ್ದಿತ್ತು. ದೇವಸ್ಥಾನ ಆಡಳಿತ ಮಂಡಳಿಯವರನನ್ನ ಕೇಳಿದಾಗ ಹುಂಡಿಗೆ ಹಾಕಿದ ಮೇಲೆ ಮರಳಿಸುವುದಿಲ್ಲ ಎಂದು ಹೇಳಿದ್ದಾರೆ.
ಈ ಹಿನ್ನಲೆಯಲ್ಲಿ ದಿನೇಶ್ ಅಧಿಕಾರಿಗಳಿಗೆ ದೂರು ನೀಡಿದ್ದು ಹೀಗಾಗಿ ಡಿಸೆಂಬರ್ 20 ರಂದು ಅಧಿಕಾರಿಗಳು ಹುಂಡಿ ಓಪನ್ ಮಾಡಿಸಿದಾಗ ಐಫೋನ್ ಸಿಕ್ಕಿದೆ. ಆದರೆ ದೇವಸ್ಥಾನದವರು ಮೊಬೈಲ್ನಲ್ಲಿರುವ ಡೇಟಾವನ್ನು ಕೊಡುತ್ತೇವೆ. ಐಫೋನ್ ನೀಡುವುದಿಲ್ಲ. ಹುಂಡಿಗೆ ಬಿದ್ದ ಬಳಿಕ ಅದು ದೇಗುಲದ ಆಸ್ತಿ ಎಂದು ಫೋನ್ ಕೊಡಲು ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ.
ಆದರೆ ಐಫೋನ್ ಬೇಕು ಎಂದಿರುವ ದಿನೇಶ್, ಡೇಟಾ ಮಾತ್ರ ಸ್ವೀಕಾರ ಮಾಡಲು ನಿರಾಕರಿಸಿ, ಬರಿಗೈಯಲ್ಲಿ ವಾಪಾಸ್ ವಾಪಸ್ ಹೋಗಿದ್ದಾರೆ.