24.9 C
Udupi
Saturday, March 22, 2025
spot_img
spot_img
HomeBlogಭಕ್ತರೊಬ್ಬರು ಕಾಣಿಕೆ ಹಾಕುವಾಗ ಆಕಸ್ಮಾತಾಗಿ ಹುಂಡಿಗೆ ಬಿದ್ದ ಐಫೋನ್: ವಾಪಸ್ ಕೊಡುವುದಿಲ್ಲವೆಂದು ಹೇಳಿದ ದೇಗುಲದ ಆಡಳಿತ...

ಭಕ್ತರೊಬ್ಬರು ಕಾಣಿಕೆ ಹಾಕುವಾಗ ಆಕಸ್ಮಾತಾಗಿ ಹುಂಡಿಗೆ ಬಿದ್ದ ಐಫೋನ್: ವಾಪಸ್ ಕೊಡುವುದಿಲ್ಲವೆಂದು ಹೇಳಿದ ದೇಗುಲದ ಆಡಳಿತ ಮಂಡಳಿ

ಚೆನ್ನೈ: ತಮಿಳುನಾಡಿನಲ್ಲಿ ದೇವಸ್ಥಾನದ ಹುಂಡಿಗೆ ಭಕ್ತರೊಬ್ಬರು ಕಾಣಿಕೆ ಹಾಕುವಾಗ ಆಕಸ್ಮಿಕವಾಗಿ ಅವರ ಐಫೋನ್ ಹುಂಡಿಗೆ ಬಿದ್ದಿದ್ದು ಆದರೆ ಈ ಕುರಿತು ದೇಗುಲದ ಆಡಳಿತ ಮಂಡಳಿ ಬಳಿ ವಿಚಾರಿಸಿದಾಗ ಐಫೋನ್ ಹಿಂದಿರುಗಿಸಲ್ಲ ಎಂದು ಹೇಳಿರುವ ಘಟನೆ ನಡೆದಿದೆ.

ತಮಿಳುನಾಡಿನ ವಿನಾಯಕಪುರಂ ನಿವಾಸಿ ದಿನೇಶ್ ಚೆನ್ನೈನ ತಿರುಪೋರೂರಿನ ಕಂದಸ್ವಾಮಿ ದೇಗುಲಕ್ಕೆ ಕಳೆದ ತಿಂಗಳು ಭೇಟಿ ನೀಡಿದ್ದ ವೇಳೆ ಹುಂಡಿಗೆ ಹಣ ಹಾಕುವ ಸಂದರ್ಭದಲ್ಲಿ ಆಕಸ್ಮಿಕ ಐಫೋನ್ ಕೂಡ ಹುಂಡಿಗೆ ಬಿದ್ದಿತ್ತು. ದೇವಸ್ಥಾನ ಆಡಳಿತ ಮಂಡಳಿಯವರನನ್ನ ಕೇಳಿದಾಗ ಹುಂಡಿಗೆ ಹಾಕಿದ ಮೇಲೆ ಮರಳಿಸುವುದಿಲ್ಲ ಎಂದು ಹೇಳಿದ್ದಾರೆ.

ಈ ಹಿನ್ನಲೆಯಲ್ಲಿ ದಿನೇಶ್ ಅಧಿಕಾರಿಗಳಿಗೆ ದೂರು ನೀಡಿದ್ದು ಹೀಗಾಗಿ ಡಿಸೆಂಬರ್ 20 ರಂದು ಅಧಿಕಾರಿಗಳು ಹುಂಡಿ ಓಪನ್ ಮಾಡಿಸಿದಾಗ ಐಫೋನ್ ಸಿಕ್ಕಿದೆ. ಆದರೆ ದೇವಸ್ಥಾನದವರು ಮೊಬೈಲ್‌ನಲ್ಲಿರುವ ಡೇಟಾವನ್ನು ಕೊಡುತ್ತೇವೆ. ಐಫೋನ್ ನೀಡುವುದಿಲ್ಲ. ಹುಂಡಿಗೆ ಬಿದ್ದ ಬಳಿಕ ಅದು ದೇಗುಲದ ಆಸ್ತಿ ಎಂದು ಫೋನ್ ಕೊಡಲು ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ.

ಆದರೆ ಐಫೋನ್ ಬೇಕು ಎಂದಿರುವ ದಿನೇಶ್, ಡೇಟಾ ಮಾತ್ರ ಸ್ವೀಕಾರ ಮಾಡಲು ನಿರಾಕರಿಸಿ, ಬರಿಗೈಯಲ್ಲಿ ವಾಪಾಸ್ ವಾಪಸ್ ಹೋಗಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page