26.6 C
Udupi
Tuesday, April 21, 2026
spot_img
spot_img
HomeBlogಭಾರತ ಪುಣ್ಯಭೂಮಿ : ಉಮನಾಥ್ ಕೋಟ್ಯನ್ ಮೂಡುಬಿದರೆ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ

ಭಾರತ ಪುಣ್ಯಭೂಮಿ : ಉಮನಾಥ್ ಕೋಟ್ಯನ್ ಮೂಡುಬಿದರೆ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ

ಮೂಡುಬಿದಿರೆ:-ಭಾರತ ದೇಶದಲ್ಲಿ ಜನಿಸಿರುವುದೇ ನಮ್ಮೆಲ್ಲರ ಭಾಗ್ಯಭಾರತ ಪುಣ್ಯ ಭೂಮಿ. 78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿರುವ ನಾವೆಲ್ಲರೂ ಸ್ವಾತಂತ್ರ್ಯಕ್ಕಾಗಿ ಮಡಿದ ಲಕ್ಷಾಂತರ ವೀರರ ಸ್ಮರಣೆಯನ್ನು ಮಾಡಿಕೊಳ್ಳುತ್ತಾ ತಾಯಿ ಭಾರತಿಗೆ, ಪುಷ್ಪಾರ್ಚನೆಯನ್ನು ಮಾಡುವಮೂಲಕ ಆಕೆಯ ಕೀರ್ತಿಯನ್ನು ಜಗದಗಲಕ್ಕೆತಲುಪಿಸುವ ಅತ್ಯಂತ ಮಹತ್ವದ ದಿನ ಇದಾಗಿದೆ.ಪ್ರತಿಯೊಬ್ಬರ ಮನಸಿನಲ್ಲಿ ತಿರಂಗ ಸದಾ ಹಾರುತ್ತಿರಲಿಎಂದು ಮೂಡುಬಿದಿರೆ-ಮುಲ್ಕಿ ವಿಧಾನ ಸಭಾ ಕ್ಷೇತ್ರದಶಾಸಕರಾದ ಉಮಾನಾಥ್ ಕೋಟ್ಯಾನ್ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ನಡೆದ 78ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನಡೆಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಯುವರಾಜ್ ಮಾತನಾಡಿ ಸ್ವಾತಂತ್ರ್ಯ ಲಭಿಸಿದ 77 ವರ್ಷಗಳಿಂದ ದೇಶದಲ್ಲಿ ಏನೆಲ್ಲ ಬದಲಾವಣೆಯಾಗಿದೆ. ನಮ್ಮ ದೇಶದ ಪ್ರಗತಿ ಹೇಗಿದೆ ಎನ್ನುವುದನ್ನು ಪ್ರತಿಯೊಬ್ಬ ವಿದ್ಯಾರ್ಥಿಯೂ ತಿಳಿದುಕೊಳ್ಳಬೇಕು. ಪ್ರತಿಯೊಬ್ಬರಹೃದಯದಲ್ಲಿ ತಾಯಿನಾಡಿನ ಬಗ್ಗೆ ಮಾತೃಭೂಮಿಯ ಬಗ್ಗೆ ಅಭಿಮಾನವಿರಬೇಕು. ನಮಗಾಗಿ ಹೋರಾಡಿ ಮಡಿದ ವೀರಯೋಧರನ್ನು ಸದಾ ಸ್ಮರಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಎಕ್ಸಲೆಂಟ್ ವಿದ್ಯಾಸಂಸ್ಥೆಗಳಕಾರ್ಯದರ್ಶಿ ರಶ್ಮಿತಾ ಜೈನ್, ಪ್ರಾಂಶುಪಾಲರಾದ ಪ್ರದೀಪ್ಕುಮಾರ್ ಶೆಟ್ಟಿ, ಮುಖ್ಯೋಪಾಧ್ಯಾಯರಾದ ಶಿವಪ್ರಸಾದ್ಭಟ್ ಉಪಸ್ಥಿತರಿದ್ದರು. ಉಪನ್ಯಾಸಕಿ ಸಾಯಿಶೃತಿ ನಿರೂಪಿಸಿದರು.ಸಹ ಮುಖ್ಯೋಪಾಧ್ಯಾಯ ಸ್ವಾಗತಿಸಿದರು. ಸಿಬಿಎಸ್‌ಸಿ ಶಾಲೆಯಪ್ರಾಂಶುಪಾಲರಾದ ಸುರೇಶ್ ವಂದಿಸಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page