
ಬೆಂಗಳೂರು : ಶಾಸಕ, ಬಿಡಿಎ ಅಧ್ಯಕ್ಷ ಎನ್.ಎ. ಹ್ಯಾರಿಸ್ ಬಿ.ಪ್ಯಾಕ್ ಹಾಗೂ ಸಿಜಿಐ ಸಹಯೋಗದಲ್ಲಿ ಶನಿವಾರ ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣ ಕಲಾಕೇಂದ್ರದಲ್ಲಿ ಶಾಂತಿನಗರ ಕ್ಷೇತ್ರದ ಮಂಗಳಮುಖಿಯರು, ಮಹಿಳೆಯರಿಗೆ ಉಚಿತ ಆಟೋ ಚಾಲನಾ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ್ದು ಈ ವೇಳೆ ಆಟೋ ಚಾಲನಾ ತರಬೇತಿ ಪಡೆಯುವ ಮಂಗಳಮುಖಿಯರು ಹಾಗೂ ಮಹಿಳೆಯರಿಗೆ ವೃತ್ತಿ ಜೀವನ ಪ್ರಾರಂಭಿಸಲು ಸರ್ಕಾರದಿಂದಲೇ ಉಚಿತವಾಗಿ ಆಟೋ ಒದಗಿಸುವ ಕುರಿತು ಸರ್ಕಾರ, ಜಿಬಿಎ ಜೊತೆ ಚರ್ಚಿಸುವುದಾಗಿ ಭರವಸೆ ನೀಡಿದ್ದಾರೆ.
ಸ್ವಾವಲಂಬಿ ಜೀವನ ಕಟ್ಟಿಕೊಳ್ಳಲು ಉಚಿತವಾಗಿ ಆಟೋ ಚಾಲನಾ ತರಬೇತಿ ನೀಡುತ್ತಿರುವುದು ಶ್ವಾಘನೀಯ. ಅರ್ಹರಿಗೆ ಸರ್ಕಾರದಿಂದಲೇ ಉಚಿತವಾಗಿ ಆಟೋ ಒದಗಿಸುವ ಬಗ್ಗೆ ಚರ್ಚಿಸುತ್ತೇನೆ ಎಂದು ಹೇಳಿದರು.




















































