
ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ಮತ್ತು ಮಣಿಪಾಲ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾ ನಗರದಲ್ಲಿ
ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪೂರ್ವ ವಿದ್ಯಾರ್ಥಿನಿ, ಮಾಹೆಯ ಯೋಗ ಕೇಂದ್ರದ ಅಸಿಸ್ಟೆಂಟ್ ಪ್ರೊಫೆಸರ್ ಡಾ.ಆತ್ಮಿಕ ಶೆಟ್ಟಿಯವರು ಯೋಗದ ಉಪಯೋಗಗಳನ್ನು ತಿಳಿಸುತ್ತಾ ಮಾನಸಿಕ ಹಾಗೂ ಶಾರೀರಿಕ ಸದೃಢತೆಯನ್ನು ಕಾಪಾಡಲು ಯೋಗವು ಅತೀ ಅವಶ್ಯ, ವಿದ್ಯಾರ್ಥಿಗಳು ಯೋಗಾಭ್ಯಾಸದೊಂದಿಗೆ ಆರೋಗ್ಯಕರ ಆಹಾರ ಬಳಸುವುದರ ಕಡೆಯೂ ಗಮನ ಹರಿಸಬೇಕು ಎಂದರು. ನಂತರ ವಿದ್ಯಾರ್ಥಿಗಳಿಗೆ ಯೋಗ ಪ್ರಾತ್ಯಕ್ಷಿಕೆಯನ್ನು ನಡೆಸಿದರು.
ಈ ಸಂದರ್ಭದಲ್ಲಿ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಶೆಟ್ಟಿ , ಜೆ.ಇ.ಇ/ನೀಟ್
ಫೌಂಡೇಶನ್ ಸ್ಟ್ಯೂಡೆಂಟ್ ಕೋರ್ಡಿನೇಟರ್ ಶಮಿತ ಮತ್ತು ದೈಹಿಕ ಶಿಕ್ಷಣ ನಿರ್ದೇಶಕರಾದ ಅರುಣ್ ಕುಮಾರ್
ಉಪಸ್ಥಿತರಿದ್ದರು. ಶಿಕ್ಷಕಿ ದೀಪ್ತಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.


































