
ಮಣಿಪುರ, ಏ.27; ಇಂದು ಮುಂಜಾನೆ ಮಣಿಪುರದ ಬಿಷ್ಣುಪುರ್ ಜಿಲ್ಲೆಯಲ್ಲಿ ಶಂಕಿತ ಉಗ್ರರರು ನಡೆಸಿದ ಬಾಂಬ್ ದಾಳಿಯಲ್ಲಿ ಇಬ್ಬರು ಸಿಆರ್ಪಿಎಫ್ ಯೋಧರು ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಮೂಲಗಳ ಪ್ರಕಾರ, ಶಂಕಿತ ಕುಕಿ ದಂಗೆಕೋರರ ಗುಂಪು ನರನ್ಸೇನಾ ಗ್ರಾಮದ ಬೆಟ್ಟದಿಂದ ಕಣಿವೆ ಪ್ರದೇಶದ ಕಡೆಗೆ ಕೇಂದ್ರ ಭದ್ರತಾ ಪಡೆ ಪೋಸ್ಟ್ನ್ನು ಗುರಿಯಾಗಿಟ್ಟುಕೊಂಡು ಗುಂಡಿನ ದಾಳಿ ನಡೆಸಿತು. ಔಟ್ಪೋಸ್ಟ್ನಲ್ಲಿ ಬಾಂಬ್ ದಾಳಿಯನ್ನು ನಡೆಸಲಾಗಿದೆ. ಇದರಿಂದ ನಾಲ್ವರು ಸಿಬ್ಬಂದಿಗೆ ತೀವ್ರ ಗಾಯಗಳಾಗಿವೆ. ತಕ್ಷಣ ಚಿಕಿತ್ಸೆ ನೀಡಿದರು, ಇದರಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಇಬ್ಬರ ಚಿಕಿತ್ಸೆ ಪಡೆಯುತ್ತಿದ್ದಾರೆ.