
ಬೆಳ್ತಂಗಡಿ: ರಾಜ್ಯದ ಹಲವೆಡೆ ವಿಪರೀತ ಮಳೆಯಾಗುತ್ತಿದ್ದು, ಅಲ್ಲಲ್ಲಿ ಗುಡ್ಡ ಕುಸಿತ, ಮರಗಳು ಧರೆಗುಳಿದ ಘಟನೆಗಳು ವರದಿಯಾಗುತ್ತಿವೆ.
ದಕ್ಷಿಣ ಕನ್ನಡ ಜಿಲ್ಲೆಯ ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ಸುರಿದ ಮಳೆಗೆ 3 ಕಡೆಗಳಲ್ಲಿ ರಸ್ತೆಗೆ ಮಣ್ಣು ಮತ್ತು ಮರಗಳು ಬಿದ್ದಿದ್ದು ವಾಹನ ಸಂಚಾರ ನಿರ್ಬಂಧಿಸಲಾಗಿತ್ತು. ಇದೀಗ ಚಾರ್ಮಾಡಿ ಘಾಟಿ ಪ್ರದೇಶದ 10ನೇ ತಿರುಗು ಸಹಿತ ಎರಡು ಮೂರು ಕರೆಗಳಲ್ಲಿ ಮಣ್ಣು ಮತ್ತು ಮರ ತೆರವು ಕಾರ್ಯ ಪೂರ್ಣಗೊಂಡಿದ್ದು, ಸಂಚಾರ ಪುನರಾರಂಭ ಮಾಡಲಾಗಿದೆ.











