
ಉತ್ತರ ಪ್ರದೇಶ್: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಕಳೆದ ವಾರದ ಬೆಂಕಿ ದುರ್ಘಟನೆ ಮಾಸುವ ಮುನ್ನವೇ ಮತ್ತೊಂದು ಅವಘಡ ಸಂಭವಿಸಿದ್ದು ಅದೇನಂದರೆ ಮತ್ತೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಪರಿಣಾಮ 15 ಅನಧಿಕೃತ ಟೆಂಟ್ಗಳು ಬೆಂಕಿಯ ಜ್ವಾಲೆಗೆ ಸುಟ್ಟು ಭಸ್ಮವಾಗಿದ್ದು ಅದೃಷ್ಟವಶಾತ್ ಯಾವುದೇ ಅನಾಹುತಗಳು ಸಂಭವಿಸಿಲ್ಲ.
ಮಹಾಕುಂಭನಗರದ ಸೆಕ್ಟರ್ 22ರ ಕ್ರಮಂಗಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸರಿಯಾದ ರಸ್ತೆ ವ್ಯವಸ್ಥೆ ಇಲ್ಲದ ಕಾರಣ ಅಗ್ನಿಶಾಮಕ ದಳ ತೆರಳುವಲ್ಲಿ ತಡವಾಗಿ ಬಳಿಕ ಯಶಸ್ವಿಯಾಗಿ ಬೆಂಕಿ ನಂದಿಸಲಾಗಿದೆ. ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ, ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.





















