
ಉಡುಪಿ: ಉಡುಪಿ ಜಿಲ್ಲೆಯ ಕಾಪು ಲೈಟ್ ಹೌಸ್ ಸಮೀಪದಲ್ಲಿ ಸಮುದ್ರದಲ್ಲಿ ಮುಳುಗುತ್ತಿದ್ದ ಮೀನುಗಾರನ್ನು ಸ್ಥಳೀಯರು ರಕ್ಷಿಸಿದ ಘಟನೆ ಸಂಭವಿಸಿದೆ.
ಸಚಿನ್ ಎಂಬ ವ್ಯಕ್ತಿ ಮೀನಿಗೆ ಬಲೆ ಬೀಸುತ್ತಿದ್ದ ವೇಳೆ ಆಯತಪ್ಪಿ ಸಮುದ್ರಕ್ಕೆ ಬಿದ್ದಿದ್ದು ಈತನ ರಕ್ಷಣೆ ಮಾಡುವುದಕ್ಕೆ ಸ್ಥಳೀಯರಾದ ಶರ್ಮಾ, ಹರೀಶ್, ಬಾಲಕೃಷ್ಣ ಕೋಟ್ಯಾನ್, ಚಂದ್ರಶೇಖರ್ ಎಂಬವರು ಸತತ ಒಂದು ಗಂಟೆಗಳ ಕಾಲ ಶೋಧಕಾರ್ಯ ನಡೆಸಿ ರಕ್ಷಿಸಿದ್ದಾರೆ.













