
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹಾಗೂ ಉಡುಪಿ ಜಿಲ್ಲೆಯಲ್ಲಿ ಮುಂಗಾರು ಮಳೆಯ ಅಬ್ಬರ ಬಾರಿ ಜೋರಾಗಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ಅರಣ್ಯ ಇಲಾಖೆಯು ಕೆಲ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದೆ.
ವನ್ಯಜೀವಿ ವಲಯದ ವ್ಯಾಪ್ತಿಗೆ ಬರುವ ಪ್ರವಾಸಿ ತಾಣಗಳಾದ
ಬೆಳ್ತಂಗಡಿ ತಾಲೂಕಿನ ನರಸಿಂಹಗಢ (ಗಡಾಯಿಕಲ್ಲು) ಬೆಟ್ಟ, ಅರಿಶಿನಗುಂಡಿ, ಕೂಡ್ಲು, ಬರ್ಕಳ, ಹಿಡ್ಲುಮನೆ, ವನಕಬ್ಬಿ, ಬಂಡಾಜೆ ಫಾಲ್ಸ್ ಸೇರಿದಂತೆ ಕೆಲವು ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿ ಬೆಳ್ತಂಗಡಿ ಆರ್ ಎಫ್ ಓ ಗೆ ಕುದುರೆಮುಖ ಸಿಎಫ್ ಆದೇಶ ಹೊರಡಿಸಿದ್ದಾರೆ.