ಬ್ಲಾಕ್ ಕಾಂಗ್ರೆಸ್ ಕಾರ್ಕಳ-ಹೆಬ್ರಿ, ಡಾ. ಟಿ.ಎಂ.ಎ ಪೈ ರೋಟರಿ ಆಸ್ಪತ್ರೆ, ಕಾರ್ಕಳ ಜಂಟಿ ಆಶ್ರಯದಲ್ಲಿ,
ಬೃಹತ್ ರಕ್ತದಾನ ಶಿಬಿರ ಹಾಗೂ ಉಚಿತ ಹೃದಯ ರೋಗ ಸಾಮಾನ್ಯ ಆರೋಗ್ಯ ಮತ್ತು ಕಣ್ಣಿನ ತಪಾಸಣೆ

ಕಾರ್ಕಳ: ಮುನಿಯಾಲು ಉದಯ ಶೆಟ್ಟಿ ಅಭಿಮಾನಿ ಬಳಗ ಬ್ಲಾಕ್ ಕಾಂಗ್ರೆಸ್ ಕಾರ್ಕಳ-ಹೆಬ್ರಿ, ಡಾ. ಟಿ.ಎಂ.ಎ ಪೈ ರೋಟರಿ ಆಸ್ಪತ್ರೆ, ಕಾರ್ಕಳ ಜಂಟಿ ಆಶ್ರಯದಲ್ಲಿ, ಕಾಂಗ್ರೆಸ್ ನಾಯಕ ಉದಯ ಶೆಟ್ಟಿ ಮುನಿಯಾಲು ಇವರ ಹುಟ್ಟು ಹಬ್ಬದ ಪ್ರಯುಕ್ತ, ಬೃಹತ್ ರಕ್ತದಾನ ಶಿಬಿರ ಹಾಗೂ ಉಚಿತ ಹೃದಯ ರೋಗ ಸಾಮಾನ್ಯ ಆರೋಗ್ಯ ಮತ್ತು ಕಣ್ಣಿನ ತಪಾಸಣೆ ದಿ.8/6/2024 ನೇ ಶನಿವಾರ ಸಮಯ ಬೆಳಿಗ್ಗೆ 9 ರಿಂದ 12:30 ರವರೆಗೆ, ಮಂಜುನಾಥ್ ಪೈ ಸಭಾಭವನ ಕಾರ್ಕಳ ಇಲ್ಲಿ ನಡೆಯಲಿದೆ.
ಇದಲ್ಲದೆ, ಕಾರ್ಕಳ ತಾಲೂಕಿನ ಸರ್ಕಾರಿ ಪ್ರೌಢಶಾಲಾ ವಿದ್ಯಾಭ್ಯಾಸದ ಎಸ್ ಎಸ್ ಎಲ್ ಸಿ ಹಾಗೂ ಕಾರ್ಕಳ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾಭ್ಯಾಸದ ದ್ವಿತೀಯ ಪಿಯುಸಿ ಪರೀಕ್ಷೆಯ ಅಧಿಕ ಅಂಕಗಳಿಸಿದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ.
