24.3 C
Udupi
Tuesday, March 18, 2025
spot_img
spot_img
HomeBlogಮೇ ಕೊನೆಯ ತಿಂಗಳವರೆಗೆ ಬಿಸಿಲು, ಬಿಸಿಗಾಳಿ ಆರೋಗ್ಯ ಕಾಪಾಡಲು ಎಚ್ಚರಿಕೆ ವಹಿಸಿ :ಜಿಲ್ಲಾಧಿಕಾರಿ ಡಾ. ಅವಿನಾಶ್...

ಮೇ ಕೊನೆಯ ತಿಂಗಳವರೆಗೆ ಬಿಸಿಲು, ಬಿಸಿಗಾಳಿ ಆರೋಗ್ಯ ಕಾಪಾಡಲು ಎಚ್ಚರಿಕೆ ವಹಿಸಿ :ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಸಲಹೆ

ರಾಮನಗರ : ಜಿಲ್ಲೆಯಲ್ಲಿ ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸ್ಟೋಕ್ನಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಗಳಿರುವುದರಿಂದ ಎಲ್ಲಾ ಸಾರ್ವಜನಿಕರಿಗೆ ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಡಾ.ಅವಿನಾಶ್‍ ಮೆನನ್‍ ರಾಜೇಂದ್ರನ್ ಸಲಹೆ ನೀಡಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಭಾರತೀಯ ಹವಾಮಾನ ಇಲಾಖೆ ಪ್ರಸ್ತುತ ಮೇ ಅಂತ್ಯದವರೆಗೆ ಸೂರ್ಯನ ಬಿಸಿಲು ಮತ್ತು ಬಿಸಿಗಾಳಿ ಹೆಚ್ಚಾಗುವ ಬಗ್ಗೆ ಮುನ್ನೆಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ತಮ್ಮ ಆರೋಗ್ಯ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಬಿಸಿಲು ದಿನಗಳಲ್ಲಿ ಕೊಡೆ/ಛತ್ರಿ ಬಳಸಲು ಹಾಗೂ ಸಾಧ್ಯವಾದಷ್ಟು ತಂಪಾದ ಸ್ಥಳಗಳಲ್ಲಿ ಉಳಿಯುವಂತೆ ಸೂಚಿಸಿದೆ. ತೆಳುವಾದ ಸಡಿಲವಾದ ಹತ್ತಿಯ ಉಡುಪುಗಳನ್ನು ಧರಿಸುವುದು, ಆದಷ್ಟು ಬಿಳಿ ಬಣ್ಣದ ಬಟ್ಟೆಗಳ ಬಳಕೆ ಒಳ್ಳೆಯದು ಎಂದು ತಿಳಿಸಿದ್ದಾರೆ.ಹತ್ತಿ ಅಥವಾ ಟರ್ಬನ್ ಟೋಪಿ ಹಾಗೂ ಕೂಲಿಂಗ್ ಗ್ಲಾಸ್ ಧರಿಸಿರಿ, ಹಿರಿಯ ನಾಗರಿಕರು ಹಾಗೂ ಮಕ್ಕಳು ಹೆಚ್ಚು ನೀರು ಕುಡಿಯಿರಿ. ಬೆಳ್ಳಿಗೆ 11ರಿಂದ ಸಂಜೆ 4 ರವರೆಗೆ ಹೊರಾಂಗಣ ದೈಹಿಕ ಚಟುವಟಿಕೆಯನ್ನು ಕಡಿಮೆ ಮಾಡಲು ಪ್ರಯತ್ನಿಸಿ. ಸಾಕಷ್ಟು ನೀರು ಕುಡಿಯಿರಿ, ಮಜ್ಜಿಗೆ ಮತ್ತು ಗ್ಲೂಕೋಸ್/ಓ.ಆರ್.ಎಸ್ ನಂತಹ ದ್ರವ ಪದಾರ್ಥಗಳನ್ನು ಹೆಚ್ಚು ಉಪಯೋಗಿಸಿ ಎಂದು ಸಲಹೆಯನ್ನು ನೀಡಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page