
ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ, ಅಪಹರಣ ಆರೋಪ ಎದುರಿಸುತ್ತಿದ್ದು ಇದೀಗ ಮೇ 31ರಂದು ಎಸ್ಐಟಿ ಎದುರು ವಿಚಾರಣೆಗೆ ಹಾಜರಾಗುವುದಾಗಿ ಅಜ್ಞಾತ ಸ್ಥಳದಿಂದ ವಿಡಿಯೊ ಬಿಡುಗಡೆ ಮಾಡಿದ್ದು ಲುಫ್ತಾನ್ಸಾ ಏರ್ಲೈನ್ಸ್ ವಿಮಾನದಲ್ಲಿ ಜರ್ಮನಿಯಿಂದ ಭಾರತಕ್ಕೆ ವಾಪಸ್ ಬರಲಿದ್ದಾರೆ. ಈಗಾಗಲೇ ಎಸ್ಐಟಿ ತಂಡ ವಿಮಾನ ನಿಲ್ದಾಣದಲ್ಲಿ ಬೀಡು ಬಿಟ್ಟಿದ್ದು ಪ್ರಜ್ವಲ್ ವಿಮಾನ ನಿಲ್ದಾಣ ಪ್ರವೇಶಿಸುತ್ತಿದ್ದಂತೆ ಎಸ್ಐಟಿ ವಶಕ್ಕೆ ಪಡೆಯಲಿದೆ.
ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನದ ಮಾರನೇ ದಿನವೇ ಪ್ರಜ್ವಲ್ ರೇವಣ್ಣ ಜರ್ಮನಿಗೆ ತೆರಳಿದ್ದು ಬಳಿಕ ಅವರ ವಿರುದ್ಧ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದವು. ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ಪ್ರಜ್ವಲ್ಗೆ ನೋಟಿಸ್ ನೀಡಿತ್ತು. ವಿದೇಶದಲ್ಲಿರುವ ಇರುವುದರಿಂದ ವಿಚಾರಣೆಗೆ ಗೈರಾಗಿದ್ದು ಹೀಗಾಗಿ ಎಸ್ಐಟಿ, ಇಂಟರ್ಪೋಲ್ ಮುಖಾಂತರ ಬ್ಲೂ ಕಾರ್ನರ್ ನೋಟಿಸ್ ಜಾರಿಗೊಳಿಸಿತ್ತು.ಪ್ರಜ್ವಲ್ನ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದು ಇದರ ಬೆನ್ನಲ್ಲೇ ವಿಡಿಯೋ ಬಿಡುಗಡೆ ಮಾಡಿದ್ದ ಪ್ರಜ್ವಲ್, ಮೇ 31ರಂದು ಬೆಂಗಳೂರಿಗೆ ಮರಳಿ ಎಸ್ಐಟಿ ಎದುರು ಹಾಜರಾಗಿ ವಿಚಾರಣೆ ಎದುರಿಸುವುದಾಗಿ ತಿಳಿಸಿದ್ದಾರೆ.