
ಯುವಶಕ್ತಿ ಸಮೂಹ ಸಂಸ್ಥೆಗಳು, ಕಾಳಿಕಾಂಬಾ ಕರಿಯಕಲ್ಲು ಇದರ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಎಜುಕೇಷನ್ ಸೊಸೈಟಿ ನಿರ್ದೇಶಕರೂ ಉದ್ಯಮಿಗಳು ಆಗಿರುವ ನವೀನ್ ಸುವರ್ಣ ದ್ವಜಾರೋಹಣಗೈದು ಸಂಸ್ಥೆಗೆ ಶುಭ ಕೋರಿದರು.
ಕಾರ್ಯಕ್ರಮದಲ್ಲಿ ಸಂಚಾಲಕರಾದ ಅಬ್ದುಲ್ ಖಾಲಿಕ್, ಎಜುಕೇಷನ್ ಸೊಸೈಟಿ ಅಧ್ಯಕ್ಷರಾದ ವಿಜಯ ಶೆಟ್ಟಿ, ಯೂತ್ ಕ್ಲಬ್ ಅಧ್ಯಕ್ಷರಾದ ಪ್ರವೀಣ ಶೆಟ್ಟಿ, ಮಹಿಳಾ ಮಂಡಳಿ ಅಧ್ಯಕ್ಷರಾದ ಶ್ರೀಮತಿ ಪ್ರಮೀಳಾ ಪ್ರಶಾಂತ್ ಕೋಟ್ಯಾನ್, ಶಾಲಾ ಮುಖ್ಯ ಶಿಕ್ಷಕಿ ನಳಿನಾಕ್ಷಿ ಹೆಗ್ಡೆ, ಶಿಕ್ಷಕಿಯರು, ಜಂಟಿ ಸಂಸ್ಥೆಗಳ ಪದಾಧಿಕಾರಿಗಳು , ಸದಸ್ಯರು ಉಪಸ್ಥಿತರಿದ್ದರು.













