
ಬೆಂಗಳೂರು: ಹಣಕಾಸು ಇಲಾಖೆಯ ವರದಿ ಬಳಿಕ ಸರ್ಕಾರವು ಆಗಸ್ಟ್ 1 ರಿಂದ 7ನೇ ವೇತನ ಆಯೋಗದ ಶಿಫಾರಸ್ಸು ಜಾರಿಗೆ ತೀರ್ಮಾನಿಸಿದೆ.
ಸಿಎಂ ಸಿದ್ದರಾಮಯ್ಯ ಮಾ.16 ರಂದು ಸುಧಾಕರ್ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿಯನ್ನು ಸ್ವೀಕಾರ ಮಾಡಿದ ಬಳಿಕ ವೇತನ ಆಯೋಗದ ಶಿಫಾರಸು ಜಾರಿ ಬಗ್ಗೆ ಹಣಕಾಸು ಇಲಾಖೆಯಿಂದ ಹಣದ ಹೊಂದಾಣಿಕೆ ಕುರಿತು ಮಾಹಿತಿ ಕೇಳಲಾಗಿತ್ತು. ಇದೀಗ ವರದಿ ಬಳಿಕ ಆಯೋಗದ ಶಿಫಾರಸು ಜಾರಿಗೊಳಿಸುವ ತೀರ್ಮಾನವನ್ನ ಸಂಪುಟ ಸಭೆಯಲ್ಲಿ ಸಿಎಂ ಪ್ರಕಟಿಸಿದ್ದಾರೆ. 27.5% ವೇತನ ಹೆಚ್ಚಳಕ್ಕೆ ವೇತನ ಆಯೋಗ ಶಿಫಾರಸು ಮಾಡಿತ್ತು. 27% ವೇತನ ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳ ಪ್ರಕಾರ ತಿಳಿದು ಬಂದಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಇಂದು ಸದನದಲ್ಲಿ ಅಧಿಕೃತವಾಗಿ ಪ್ರಕಟ ಮಾಡುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.








