ಸ್ಫೋಟಕ ಮಾಹಿತಿ ಬಹಿರಂಗ..!
ದರ್ಶನ್ಗೆ ಕಂಟಕವಾಗುತ್ತಾ ಪ್ರದೋಷ್?;

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 14ನೇ ಆರೋಪಿಯಾಗಿರುವ ಪ್ರದೋಷ್ ಮಾಫಿ ಸಾಕ್ಷಿಯಾಗಲು ಮುಂದಾಗಿದ್ದು, ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಪ್ರಕರಣದ ಕುರಿತು ತನಗೆ ತಿಳಿದಿರುವ ಸಂಪೂರ್ಣ ಮಾಹಿತಿಯನ್ನು ನ್ಯಾಯಾಲಯದ ಮುಂದೆ ಬಹಿರಂಗಪಡಿಸುವುದಾಗಿ ತಿಳಿಸಿ ಅರ್ಜಿ ಸಲ್ಲಿಸಿದ್ದಾರೆ.
ಪ್ರದೋಷ್ ಸಲ್ಲಿಸಿರುವ ಅರ್ಜಿಯಲ್ಲಿ ದರ್ಶನ್ ವಿರುದ್ಧ ಹಲವು ಗಂಭೀರ ಆರೋಪಗಳನ್ನು ಮಾಡಲಾಗಿದೆ. ಪ್ರಕರಣದಲ್ಲಿ ಸಹಕರಿಸದಿದ್ದರೆ ಗನ್ನಿಂದ ಶೂಟ್ ಮಾಡಿಕೊಂಡು ಸಾಯುವುದಾಗಿ ದರ್ಶನ್ ಬೆದರಿಕೆ ಹಾಕಿದ್ದರಿಂದ ತಾವು ಅವರಿಗೆ ಸಹಾಯ ಮಾಡಬೇಕಾಯಿತು ಎಂದು ಪ್ರದೋಷ್ ತಿಳಿಸಿದ್ದಾರೆ.
ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆದ ವೇಳೆ ತಾವು ಸ್ಥಳದಲ್ಲಿದ್ದುದಾಗಿ ಹೇಳಿರುವ ಪ್ರದೋಷ್, ಹಲ್ಲೆಯನ್ನು ತಡೆಯಲು ಪ್ರಯತ್ನಿಸಿದ್ದೆ. ಆದರೆ ರೇಣುಕಾಸ್ವಾಮಿಗೆ ಅಮಾನುಷವಾಗಿ ಹಲ್ಲೆ ನಡೆಸಲಾಗಿದ್ದು, ಸಿಗರೇಟಿನಿಂದಲೂ ಸುಡಲಾಗಿತ್ತು. ದರ್ಶನ್ ಕೂಡ ಹಲ್ಲೆ ನಡೆಸಿದ್ದರು ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.
ಪ್ರಕರಣದಲ್ಲಿ ಭಾಗಿಯಾಗಿರುವವರ ಬಗ್ಗೆ ತಮಗೆ ಸಂಪೂರ್ಣ ಮಾಹಿತಿ ಇದೆ. ಮಾಫಿ ಸಾಕ್ಷಿಯಾಗಿ ಪರಿಗಣಿಸಿದರೆ ಎಲ್ಲ ವಿವರಗಳನ್ನು ನ್ಯಾಯಾಲಯದ ಮುಂದೆ ಹೇಳುವುದಾಗಿ ಪ್ರದೋಷ್ ತಿಳಿಸಿದ್ದಾರೆ. ಹೀಗಾಗಿ ಅವರ ಅರ್ಜಿ ದರ್ಶನ್ಗೆ ಮತ್ತಷ್ಟು ಸಂಕಷ್ಟ ತಂದೊಡ್ಡುವ ಸಾಧ್ಯತೆಯಿದೆ. ಈ ಅರ್ಜಿಯ ವಿಚಾರಣೆ ಇಂದು (ಆ.10)ರಂದು ನಡೆಯಲಿದೆ.

























































