32.7 C
Udupi
Sunday, March 23, 2025
spot_img
spot_img
HomeBlogಲೈಂಗಿಕ ಕಿರುಕುಳ ಪ್ರಕರಣ; ವಿಮಾನ ನಿಲ್ದಾಣದಲ್ಲಿ ಪ್ರಜ್ವಲ್ ರೇವಣ್ಣನನ್ನು ವಶಕ್ಕೆ ಪಡೆದ ಎಸ್ಐಟಿ

ಲೈಂಗಿಕ ಕಿರುಕುಳ ಪ್ರಕರಣ; ವಿಮಾನ ನಿಲ್ದಾಣದಲ್ಲಿ ಪ್ರಜ್ವಲ್ ರೇವಣ್ಣನನ್ನು ವಶಕ್ಕೆ ಪಡೆದ ಎಸ್ಐಟಿ

ಬೆಂಗಳೂರು: ಅಶ್ಲೀಲ ವಿಡಿಯೋ ಬಹಿರಂಗ ಬೆನ್ನಲ್ಲೇ ವಿದೇಶಕ್ಕೆ ಪರಾರಿಯಾಗಿದ್ದ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಇಂದು ಜರ್ಮನಿಯ ಮ್ಯೂನಿಕ್ ನಿಂದ ಬೆಂಗಳೂರಿಗೆ ಆಗಮಿಸಿದ್ದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಸ್ಐಟಿ ಅಧಿಕಾರಿಗಳು ಅವರನ್ನು ಬಂಧಿಸಿದ್ದಾರೆ.

ದೇಶ ಬಿಟ್ಟು ಪರಾರಿಯಾದ ಒಂದು ತಿಂಗಳ ಬಳಿಕ ಪ್ರತ್ಯಕ್ಷವಾಗಿದ್ದ ಪ್ರಜ್ವಲ್ ರೇವಣ್ಣ ವಿಡಿಯೋ ಮಾಡಿ ತಾನು ಮೇ 31ರಂದು ಬೆಂಗಳೂರಿಗೆ ಆಗಮಿಸುವುದಾಗಿ ಹೇಳಿದ್ದರು. ಅಲ್ಲದೆ ಲುಫ್ತಾನ್ಸ ವಿಮಾನದಲ್ಲಿ 30ನೇ ತಾರೀಕಿನಂದು ವಿಮಾನ ಬುಕ್ ಸಹ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳು ಅಲರ್ಟ್ ಆಗಿದ್ದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀಡು ಬಿಟ್ಟಿದ್ದರು.

ಇದೀಗ ಲುಫ್ತಾನ್ಸ ಎಲ್ಎಚ್ 764 ವಿಮಾನದಲ್ಲಿ ಬೆಂಗಳೂರಿಗೆ ಪ್ರಜ್ವಲ್ ರೇವಣ್ಣ ಆಗಮಿಸಿದ್ದಾರೆ. ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ಹಾಗೂ ಲುಕ್ ಔಟ್ ನೋಟಿಸ್ ಸಹ ಹೊರಡಿಸಲಾಗಿದೆ. ಹೀಗಾಗಿ ಮೊದಲಿಗೆ ವಿಮಾನ ನಿಲ್ದಾಣದಲ್ಲಿ ಇಮಿಗ್ರೇಷನ್ ಅಧಿಕಾರಿಗಳು ಪ್ರಜ್ವಲ್ ರೇವಣ್ಣರನ್ನು ವಶಕ್ಕೆ ಪಡೆಯಲಿದ್ದಾರೆ. ನಂತರ ಕೆಲ ಡ್ರಾಫ್ಟ್ ಗಳನ್ನು ರಚಿಸಿ ಅದಕ್ಕೆ ಇಮಿಗ್ರೇಷನ್ ಅಧಿಕಾರಿಗಳು ಸಹಿ ಪಡೆಯಲಿದ್ದಾರೆ. ಈ ಬಗ್ಗೆ ಲೋಕಸಭೆ ಸ್ಪೀಕರ್ ಗೆ ಇಮಿಗ್ರೇಷನ್ ಅಧಿಕಾರಿಗಳು ಮಾಹಿತಿ ನೀಡಲಿದ್ದಾರೆ.

ರಾಜ್ಯದಲ್ಲಿ ಏಪ್ರಿಲ್ 26ರಂದು ನಡೆದ ಮೊದಲ ಹಂತದ ಲೋಕಸಭೆ ಚುನಾವಣೆ ಮತದಾನ ಬಳಿಕ ಏಪ್ರಿಲ್ 27ರಂದು ಪ್ರಜ್ವಲ್ ರೇವಣ್ಣ ತಮ್ಮ ರಾಜತಾಂತ್ರಿಕ ಪಾಸ್ ಪೋರ್ಟ್ ಬಳಸಿ ಜರ್ಮನಿಗೆ ತೆರಳಿದ್ದರು. ಇದೀಗ ಪ್ರಜ್ವಲ್ ರೇವಣ್ಣರನ್ನು ವಶಕ್ಕೆ ಪಡೆದಿರುವ ಎಸ್ಐಟಿ ಪೊಲೀಸರು ಎಸ್ಐಟಿ ಕಚೇರಿಗೆ ಕರೆತರುತ್ತಿದ್ದಾರೆ.ಪ್ರಜ್ವಲ್ ರೇವಣ್ಣನನ್ನು ವಶಕ್ಕೆ ಪಡೆದಿರುವ ಎಸ್‌ಐಟಿ ಅಧಿಕಾರಿಗಳು ಇಂದು ಬೆಳಗ್ಗೆ ಆರೋಗ್ಯ ತಪಾಸಣೆ ನಡೆಸಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ ತಮ್ಮ ವಶಕ್ಕೆ ಕೇಳಲಿದ್ದಾರೆ. ಸದ್ಯ ಎಸ್ಐಟಿ ಕಚೇರಿ ಬಳಿ ಬಿಗಿ ಭದ್ರತೆ ಒದಗಿಸಲಾಗಿದೆ. ಬ್ಯಾರಿಕೇಡ್ ಹಾಕಿ ಬಂದೋಬಸ್ತ್ ಮಾಡಲಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page