24.3 C
Udupi
Tuesday, March 18, 2025
spot_img
spot_img
HomeBlogವಾಣಿಜ್ಯ ನಗರಿ ಮುಂಬೈ ಯಲ್ಲಿ ವರುಣನ ಆರ್ಭಟಕ್ಕೆ ತಗ್ಗು ಪ್ರದೇಶಗಳ ಜನಜೀವನ ಅಸ್ತವ್ಯಸ್ತ

ವಾಣಿಜ್ಯ ನಗರಿ ಮುಂಬೈ ಯಲ್ಲಿ ವರುಣನ ಆರ್ಭಟಕ್ಕೆ ತಗ್ಗು ಪ್ರದೇಶಗಳ ಜನಜೀವನ ಅಸ್ತವ್ಯಸ್ತ

ಮುಂಬೈ: ವಾಣಿಜ್ಯ ನಗರಿ ಮುಂಬೈಯಲ್ಲಿ ವರುಣನ ಆರ್ಭಟ ಜೋರಾಗಿದ್ದು ಈ ಹಿನ್ನೆಲೆಯಲ್ಲಿ ತಗ್ಗು ಪ್ರದೇಶಗಳು ಜಲಾವೃತಗೊಂಡು ಅಲ್ಲಿನ ಜನಜೀವನ ಅಸ್ತವ್ಯಸ್ತಗೊಂಡಿದೆ.

ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ರೈಲು ಹಳಿಗಳು ಜಲಾವೃತಗೊಂಡಿದ್ದು ಪರಿಣಾಮ ಹಲವಾರು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಅಲ್ಲದೆ ಪ್ರಮುಖ ರಸ್ತೆಗಳಲ್ಲಿ ನೀರು ನಿಂತು ವಾಹನ ಸವಾರರಿಗೆ ತೊಂದರೆ ಉಂಟಾಗಿದೆ.

ಹವಾಮಾನ ಇಲಾಖೆಯು ಮುಂದಿನ 3-4 ದಿನಗಳಲ್ಲಿ ಮುಂಬೈ ಸೇರಿದಂತೆ ಇಡೀ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಭಾಂಡೂಪ್ ನಿಲ್ದಾಣದಲ್ಲಿ ರೈಲು ಹಳಿ ಜಲಾವೃತವಾಗಿದ್ದು ಇದರಿಂದ ಸೆಂಟ್ರಲ್ ರೈಲ್ವೇ ಸಂಚಾರಕ್ಕೆ ಅಡಚಣೆಯಾಗಿದೆ.
ಕುರ್ಲಾ-ಮಾನ್‌ಖುರ್ದ್ ನಿಲ್ದಾಣದ ರೈಲ್ವೆ ಹಳಿ ಜಲಾವೃತಗೊಂಡಿದ್ದು ಪರಿಣಾಮ ಹಾರ್ಬರ್ ಮಾರ್ಗದಲ್ಲಿ ಸಂಚರಿಸುವ ಸ್ಥಳೀಯ ರೈಲುಗಳನ್ನು ಸ್ಥಗಿತಗೊಳಿಸಲಾಗಿದೆ. ಇನ್ನು ವಡಾಲಾದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ನಿಂತ ನಿಟ್ಟಿನಲ್ಲಿ ಗೋರೆಗಾಂವ್ ಸಿಎಸ್‌ಎಂಟಿ ಲೋಕಲ್ ರೈಲನ್ನು ಮುಂದಿನ ಸೂಚನೆ ಬರುವವರೆಗೆ ಸಂಪೂರ್ಣವಾಗಿ ಮುಚ್ಚಲಾಗಿದೆ.
ಅಂಧೇರಿ, ಕುರ್ಲಾ, ಭಾಂಡೂಪ್, ಕಿಂಗ್ಸ್ ಸರ್ಕಲ್, ವಿಲೆ ಪಾರ್ಲೆ ಮತ್ತು ದಾದರ್ ಸೇರಿದಂತೆ ಹಲವಾರು ಪ್ರದೇಶಗಳಲ್ಲಿ ಭಾರಿ ಮಳೆಯಿಂದಾಗಿ ಪ್ರಮುಖ ರಸ್ತೆಗಳು ನೀರಿನಿಂದ ಆವೃತಗೊಂಡಿದ್ದರಿಂದ ವಾಹನ ಸವಾರರಿಗೆ ಭಾರಿ ಅಡಚಣೆ ಉಂಟಾಗಿದೆ.ಮುಂಬೈ: ವಾಣಿಜ್ಯ ನಗರಿ ಮುಂಬೈಯಲ್ಲಿ ವರುಣನ ಆರ್ಭಟ ಜೋರಾಗಿದ್ದು ಈ ಹಿನ್ನೆಲೆಯಲ್ಲಿ ತಗ್ಗು ಪ್ರದೇಶಗಳು ಜಲಾವೃತಗೊಂಡು ಅಲ್ಲಿನ ಜನಜೀವನ ಅಸ್ತವ್ಯಸ್ತಗೊಂಡಿದೆ.ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ರೈಲು ಹಳಿಗಳು ಜಲಾವೃತಗೊಂಡಿದ್ದು ಪರಿಣಾಮ ಹಲವಾರು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಅಲ್ಲದೆ ಪ್ರಮುಖ ರಸ್ತೆಗಳಲ್ಲಿ ನೀರು ನಿಂತು ವಾಹನ ಸವಾರರಿಗೆ ತೊಂದರೆ ಉಂಟಾಗಿದೆ.ಹವಾಮಾನ ಇಲಾಖೆಯು ಮುಂದಿನ 3-4 ದಿನಗಳಲ್ಲಿ ಮುಂಬೈ ಸೇರಿದಂತೆ ಇಡೀ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಭಾಂಡೂಪ್ ನಿಲ್ದಾಣದಲ್ಲಿ ರೈಲು ಹಳಿ ಜಲಾವೃತವಾಗಿದ್ದು ಇದರಿಂದ ಸೆಂಟ್ರಲ್ ರೈಲ್ವೇ ಸಂಚಾರಕ್ಕೆ ಅಡಚಣೆಯಾಗಿದೆ.ಕುರ್ಲಾ-ಮಾನ್‌ಖುರ್ದ್ ನಿಲ್ದಾಣದ ರೈಲ್ವೆ ಹಳಿ ಜಲಾವೃತಗೊಂಡಿದ್ದು ಪರಿಣಾಮ ಹಾರ್ಬರ್ ಮಾರ್ಗದಲ್ಲಿ ಸಂಚರಿಸುವ ಸ್ಥಳೀಯ ರೈಲುಗಳನ್ನು ಸ್ಥಗಿತಗೊಳಿಸಲಾಗಿದೆ. ಇನ್ನು ವಡಾಲಾದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ನಿಂತ ನಿಟ್ಟಿನಲ್ಲಿ ಗೋರೆಗಾಂವ್ ಸಿಎಸ್‌ಎಂಟಿ ಲೋಕಲ್ ರೈಲನ್ನು ಮುಂದಿನ ಸೂಚನೆ ಬರುವವರೆಗೆ ಸಂಪೂರ್ಣವಾಗಿ ಮುಚ್ಚಲಾಗಿದೆ.ಅಂಧೇರಿ, ಕುರ್ಲಾ, ಭಾಂಡೂಪ್, ಕಿಂಗ್ಸ್ ಸರ್ಕಲ್, ವಿಲೆ ಪಾರ್ಲೆ ಮತ್ತು ದಾದರ್ ಸೇರಿದಂತೆ ಹಲವಾರು ಪ್ರದೇಶಗಳಲ್ಲಿ ಭಾರಿ ಮಳೆಯಿಂದಾಗಿ ಪ್ರಮುಖ ರಸ್ತೆಗಳು ನೀರಿನಿಂದ ಆವೃತಗೊಂಡಿದ್ದರಿಂದ ವಾಹನ ಸವಾರರಿಗೆ ಭಾರಿ ಅಡಚಣೆ ಉಂಟಾಗಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page