ತಲೆಮರೆಸಿಕೊಂಡಿದ್ದ,ಶಾರದಾ ಇನ್ಸ್ಟಿಟ್ಯೂಟ್ ನಿರ್ದೇಶಕ ಸ್ವಾಮಿ ಚೈತನ್ಯಾನಂದ ಸರಸ್ವತಿ ಬಂಧನ

ನವದೆಹಲಿ: ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ದೆಹಲಿಯ ಶಾರದಾ ಇನ್ಸ್ಟಿಟ್ಯೂಟ್ ನಿರ್ದೇಶಕ ಸ್ವಾಮಿ, ಚೈತನ್ಯಾನಂದ ಸರಸ್ವತಿ ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದು, ಇದೀಗ ಅವರನ್ನು ಉತ್ತರ ಪ್ರದೇಶದ ಆಗ್ರಾದಲ್ಲಿ ಬಂಧಿಸಲಾಗಿದೆ.
ಸ್ವಾಮಿಯ ವಿರುದ್ಧ 2009 ಮತ್ತು 2016ರಲ್ಲಿ, ಎರಡು ದೂರುಗಳು ದಾಖಲಾಗಿದ್ದು, ವಿದ್ಯಾರ್ಥಿಗಳನ್ನು ತನ್ನ ಕೆಳಮಹಡಿಗೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಎಂಬ ಆರೋಪ ಕೇಳಿ ಬಂದಿದೆ.
ಸಂಸ್ಥೆಗೆ ಸೇರಿದ ಕೆಲವೇ ದಿನಗಳಲ್ಲಿ ಚೈತನ್ಯನಂದರು, ಅಶ್ಲೀಲ ಸಂದೇಶಗಳನ್ನು ಕಳುಹಿಸಿ ತರಗತಿಗಳ ಬಳಿಕ ಕಚೇರಿಗೆ ಕರೆಯುತ್ತಿದ್ದರು. ದುಬೈ ಪ್ರವಾಸಕ್ಕೆ ಕರೆದೊಯ್ಯುವುದಾಗಿ ಭರವಸೆ ನೀಡಿದ್ದರು. ನಿರಾಕರಿಸಿದಾಗ ಸಿಬ್ಬಂದಿಯ ಮೂಲಕ ನಿರಂತರ ಒತ್ತಡ ಹೇರುತ್ತಿದ್ದರು. ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡು ಹಾಸ್ಟೆಲ್ ನಲ್ಲಿ ಒಂಟಿಯಾಗಿರಲು ಒತ್ತಡ ಹೇರಲಾಗುತ್ತಿತ್ತು, ಎಂದು 2016ರಲ್ಲಿ ಪ್ರಕರಣ ದಾಖಲಿಸಿದ್ದ ಸಂತ್ರಸ್ತೆಯೊಬ್ಬಳು ತನ್ನ ದೂರಿನಲ್ಲಿ ಹಂಚಿಕೊಂಡಿದ್ದಾರೆ.
ಚೈತನ್ಯಾನಂದ ಸ್ವಾಮಿ ನಿರೀಕ್ಷಣಾ ಜಾಮೀನಿಗೆ ಅರ್ಜಿಯನ್ನು ಸೆಷನ್ಸ್ ಕೋರ್ಟ್ ಗೆ ಸಲ್ಲಿಸಿದ್ದು ಕೇಸ್ ನ ಗಂಭೀರತೆಯನ್ನು ಪರಿಗಣಿಸಿ, ಬೇಲ್ ತಿರಸ್ಕರಿಸಲಾಗಿದೆ.






















































