ಅಮೃತ ಶಿಬಿರ – 2025 ಉದ್ಘಾಟನೆ

ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಅಮೃತ ಶಿಬಿರ 2025 ಇದರ ಉದ್ಘಾಟನಾ ಕಾರ್ಯಕ್ರಮವು ಶಾಲಾ ಸಭಾಂಗಣದಲ್ಲಿ ನಡೆಯಿತು ಶಿಬಿರದ ಉದ್ಘಾಟನೆಯನ್ನು ರಾಷ್ಟ್ರ ಪ್ರಶಸ್ತಿ ವಿಜೇತ ನಿವೃತ್ತ ಶಿಕ್ಷಕರಾದ ಶ್ರೀಯುತ ನಾಗಭೂಷಣ ಜೋಶಿ ಇವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅಬಾಕಸ್ ನೆಕ್ಸ್ಟ್ ಜನರೇಶನ್ ಇದರ ಸಂಸ್ಥಾಪಕರಾದ ಗುರುರಾಜ ಹೆಗ್ಡೆ ಯೋಗಸಂಪನ್ಮೂಲ ವ್ಯಕ್ತಿ ಪದ್ಮ ಗಂಗಾಧರ ಭಗವದ್ಗೀತೆ ಸಂಪನ್ಮೂಲ ವ್ಯಕ್ತಿ ಶಿಲ್ಪ ಡೋಂಗ್ರೆ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ನಾಗಭೂಷಣ ಮರಾಠೆ ಮತ್ತು ವೇದಗಣಿತ ಸಂಪನ್ಮೂಲ ವ್ಯಕ್ತಿ ಲತಾ ಉಪಸ್ಥಿತರಿದ್ದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಗುರುಕುಲ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಗಜಾನನ ಮರಾಠೆ ವಹಿಸಿದ್ದರು. ಮುಖ್ಯ ಶಿಕ್ಷಕಿ ಪೂರ್ಣಿಮಾ ಸ್ವಾಗತಿಸಿ ಶಿಕ್ಷಕಿ ಶೋಭಾ ಕಾರ್ಯಕ್ರಮ ನಿರೂಪಿಸಿ ಧನ್ಯವಾದ ನೀಡಿದರು ಈ ಶಿಬಿರದಲ್ಲಿ ಸುಮಾರು 60 ವಿದ್ಯಾರ್ಥಿಗಳು ಭಾಗವಹಿಸಿದ್ದರು.





















































































