ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಆಚರಣೆ

ಶ್ರೀ ದುರ್ಗಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಕುಕ್ಕುಂದೂರು ಇಲ್ಲಿ ದಿನಾಂಕ 14.04.2025ನೇ ಸೋಮವಾರ ರಂದು ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು.

ಮುಖ್ಯ ಶಿಕ್ಷಕರಾದ ಜಗದೀಶ್ ಹೆಗ್ಡೆಯವರುದೀಪವನ್ನು ಬೆಳಗಿಸಿ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಭಾರತ ದೇಶಕ್ಕೆ ಅಂಬೇಡ್ಕರ್ ರವರ ಕೊಡುಗೆಗಳನ್ನು ವಿವರಿಸಿದರು. ಸಹ ಶಿಕ್ಷಕಿ ಶ್ರೀಮತಿ ಅನಿತಾ ರವರು ಅಂಬೇಡ್ಕರ್ ಅವರ ಜೀವನದ ಪ್ರಮುಖ ಘಟನೆಗಳನ್ನು ಮಕ್ಕಳಿಗೆ ತಿಳಿಸಿದರು. ಏಳನೇ ತರಗತಿ ವಿದ್ಯಾರ್ಥಿನಿಯದ ಸುಪ್ರತೀಕ್ಷ ಅಂಬೇಡ್ಕರ್ ಅವರ ಸಾಧನೆಗಳನ್ನು ಸಹಪಾಠಿಗಳಿಗೆ ತಿಳಿಸಿದರು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.





















