
ಕಾರ್ಕಳ: ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದ 8ನೇ ತರಗತಿ ವಿದ್ಯಾರ್ಥಿ ಮಾಸ್ಟರ್ ಅಶ್ವಿನ್ ಎ. ಶೆಟ್ಟಿ ಇವರು ಆಳ್ವಾಸ್ ಬ್ಯಾಡ್ಮಿಂಟನ್ ಅಕಾಡೆಮಿ ಆಯೋಜಿಸಿದ ಮೂಡುಬಿದಿರೆ ಆಳ್ವಾಸ್ ಕಾಲೇಜಿನಲ್ಲಿ ನಡೆದ ಮಾನ್ಸೂನ್ ಬ್ಯಾಡ್ಮಿಂಟನ್ ಟೂರ್ನಮೆಂಟ್ ನಲ್ಲಿ ಭಾಗವಹಿಸಿ 17 ವರುಷದ ಒಳಗಿನ ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.
ಇವರನ್ನು ಶಾಲಾ ಆಡಳಿತ ಮಂಡಳಿಯ ಸದಸ್ಯರು, ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದ ಅಭಿನಂದಿಸಿ ಶುಭ ಹಾರೈಸಿರುತ್ತಾರೆ.






























































































































