
ಕಾರ್ಕಳ: ಶ್ರೀ ಶ್ರೀ ರವಿಶಂಕರ್ ವಿದ್ಯಾಮಂದಿರದಲ್ಲಿ, ಫೆಬ್ರವರಿ 4 ರಂದು ರಥ ಸಪ್ತಮಿ ದಿನವನ್ನು ಆಚರಿಸಲಾಯಿತು.
ಈ ದಿನವನ್ನು ಸೂರ್ಯ ಜಯಂತಿ ಎಂದೂ ಕರೆಯಲಾಗುತ್ತದೆ. ಈ ಆಚರಣೆ ಅಂಗವಾಗಿ ಸೂರ್ಯ ದೇವರಿಗೆ ವಿಶಿಷ್ಟ ಪೂಜೆ ಹಾಗೂ ಮಕ್ಕಳು ಮತ್ತು ಶಿಕ್ಷಕಿಯರು ಸೂರ್ಯ ಮಂತ್ರವನ್ನು ಪಠಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶು ಪಾಲರಾದ ಶ್ರೀಮತಿ ಸೋನಲ್ ಆರ್.ಕಾಮತ್,ಉಪಪ್ರಾಂಶುಪಾಲರಾದ ಶ್ರೀಮತಿ ಸುಜಾತ. ಕೆ,ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.





















