32.5 C
Udupi
Wednesday, April 30, 2025
spot_img
spot_img
HomeBlog"ಸಂವಿಧಾನವನ್ನೇ ಬದಲಾಯಿಸುತ್ತೇವೆ" ಡಿಸಿಎಂ ಹೇಳಿಕೆ ದುರಾದೃಷ್ಟಕರ

“ಸಂವಿಧಾನವನ್ನೇ ಬದಲಾಯಿಸುತ್ತೇವೆ” ಡಿಸಿಎಂ ಹೇಳಿಕೆ ದುರಾದೃಷ್ಟಕರ

ಮುಸ್ಲಿಂ ಮೀಸಲಾತಿಯ ವೋಟ್ ಬ್ಯಾಂಕ್ ರಾಜಕಾರಣ, ದಲಿತ ಸಮುದಾಯಕ್ಕೆ ಶಾಶ್ವತ ಅನ್ಯಾಯ

ಮಾಜಿ ಸಚಿವ , ಶಾಸಕ ವಿ. ಸುನಿಲ್ ಕುಮಾರ್ ಆಕ್ರೋಶ

ಬೆಂಗಳೂರು : ಸಂವಿಧಾನಕ್ಕೆ ವಿರುದ್ಧವಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮುಸ್ಲಿಂ ಮೀಸಲಾತಿಯನ್ನು ಸಮರ್ಥಿಸಿಕೊಳ್ಳುವುದಕ್ಕಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು “ಸಂವಿಧಾನವನ್ನೇ ಬದಲಾಯಿಸುತ್ತೇವೆ” ಎಂದು ಅಹಮ್ಮಿಕೆಯ ಮಾತನಾಡಿರುವುದು ದುರಾದೃಷ್ಟಕರ ಎಂದು ಮಾಜಿ ಸಚಿವ ವಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.


ಸಂವಿಧಾನವನ್ನೇ ಅಮಾನತಿನಲ್ಲಿಟ್ಟು ತುರ್ತು ಪರಿಸ್ಥಿತಿಯನ್ನು ಹೇರಿದ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷರಿಂದ ಇನ್ನೇನು ನಿರೀಕ್ಷೆ ಮಾಡಲು ಸಾಧ್ಯ ?
ಸಂವಿಧಾನವನ್ನು ಬದಲಾಯಿಸಲು ಹೊರಟರೆ ರಕ್ತಪಾತವಾಗುತ್ತದೆ ಎಂದು ಈ ಹಿಂದೆ ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಈಗ ಯಾವ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಅವರು ಪ್ರಶ್ನಿಸಿದ್ದಾರೆ.
ಹಿಂದುಳಿದ ವರ್ಗ ಹಾಗೂ ದಲಿತ ಸಮುದಾಯಕ್ಕೆ ಶಾಶ್ವತ ಅನ್ಯಾಯ ಮಾಡುವ ನಿರ್ಧಾರವನ್ನು ಯಾವುದೇ ಕಾರಣಕ್ಕೂ ಒಪ್ಪಿಕೊಳ್ಳುವುದಕ್ಕೆ ಸಾಧ್ಯವಿಲ್ಲ.
ಹಿಂದುಳಿದ ವರ್ಗಕ್ಕೆ ನ್ಯಾಯಬದ್ಧವಾಗಿ ಸಿಗಬೇಕಿದ್ದ ಮೀಸಲನ್ನು ಮುಸ್ಲಿಂರಿಗೆ ವರ್ಗಾಯಿಸುತ್ತಿರುವ ನಿಮ್ಮ ಮತ ಬ್ಯಾಂಕ್ ರಾಜಕಾರಣದ ವಿರುದ್ಧ ಬಿಜೆಪಿ ಹೋರಾಟ ರೂಪಿಸುತ್ತದೆ. ಕಾಂಗ್ರೆಸ್ ಎಂದರೆ ಓಬಿಸಿ- ದಲಿತ ವಿರೋಧಿ, ಕಾಂಗ್ರೆಸ್ ಹಿಂದು ವಿರೋಧಿ, ಕಾಂಗ್ರೆಸ್ ಎಂದರೆ ಸಂವಿಧಾನ ವಿರೋಧಿ ಎಂಬುದಕ್ಕೆ ಇದಕ್ಕಿಂತ ಬೇರೆ ಉದಾಹರಣೆ ಬೇಕಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪೂರ್ವನಿಯೋಜಿತ :
ಅದೇ ರೀತಿ ಸ್ಪೀಕರ್ ಖಾದರ್ ಅವರು ಬಿಜೆಪಿಯ ಹದಿನೆಂಟು ಶಾಸಕರನ್ನು ಅಮಾನತು ಪೂರ್ವಯೋಜಿತ ಎಂಬ ಅನುಮಾನ ಬರುತ್ತಿದೆ. ಏಕೆಂದರೆ ಅಧಿವೇಶನ ಪ್ರಾರಂಭವಾದ ನಂತರದ ವಾರದಲ್ಲಿ ಅವರು ಬಿಜೆಪಿ ಶಾಸಕರಿಗೆ ಎತ್ತಿ ಬಿಸಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಹೀಗಾಗಿ ಇದು ಪೂರ್ವ ಯೋಜಿತ ಎಂಬ ಅನುಮಾನ ಬರುತ್ತಿದೆ. ತಕ್ಷಣ ಈ ಅಮಾನತು ಆದೇಶವನ್ನು ವಾಪಾಸ್ ತೆಗೆದುಕೊಳ್ಳಬೇಕೆಂದು ನಾನು ಮನವಿ ಮಾಡುತ್ತೇನೆ ಎಂದು ಒತ್ತಾಯಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page